ಮನರಂಜನೆ

ಶಾರೂಖ್‍ ಆಯ್ತು ಈಗ ಸಲ್ಮಾನ್‍ ಖಾನ್‍ಗೆ ಅಟ್ಲಿ ನಿರ್ದೇಶನ

ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್‍ ನಟ ಶಾರೂಖ್‍ ಖಾನ್‍ ಅಭಿನಯದಲ್ಲಿ ‘ಪಠಾನ್‍’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್‍’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಇನ್ನೊಂದು ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಾರೋ ಅಥವಾ ತಮಿಳಿನತ್ತ ವಾಪಸ್ಸು ಬರುತ್ತಾರೋ ಎಂಬ ಕುತೂಹಲ ಇತ್ತು.

ಆ ಕುತೂಹಲಕ್ಕೆ ಈಗ ಕೊನೆಗೂ ಉತ್ತರ ಸಿಕ್ಕಿದೆ. ಶಾರೂಖ್‍ ಖಾನ್‍ ನಂತರ ಇದೀಗ ಅಟ್ಲಿ, ಸಲ್ಮಾನ್ ಖಾನ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ,, ಈ ಚಿತ್ರದಲ್ಲಿ ಕಮಲ್‍ ಹಾಸನ್‍ ಸಹ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇದೊಂದು ಆ್ಯಕ್ಷನ್‍ ಚಿತ್ರವಾಗಿದ್ದು 2025ರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್‍ ಕೆಲಸಗಳು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನಷ್ಟು ಮಾಹಿತಿ ನೀಡಲಿದೆ ಎಂದು ಹೇಳಲಾಗಿದೆ.

ಈ ಚಿತ್ರದ ಒಂದು ಸೆಟ್‍ಗೆ 15 ಕೋಟಿ ರೂ ಖರ್ಚು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಮುಂಬೈನ ಧಾರಾವಿ ಮತ್ತು ಮಾತುಂಗ ಪ್ರದೇಶಗಳ ನಿರ್ಮಾಣ ಮಾಡಲಾಗುತ್ತಿದ್ದು, ಆ ನಂತರ ಚಿತ್ರಕ್ಕಾಗಿ ಭವ್ಯ ಅರಮನೆಯ ಸೆಟ್‍ನ್ನು ಸಹ ಹಾಕಲಾಗುತ್ತದಂತೆ.

ಸದ್ಯ ಸಲ್ಮಾನ್‍ ಖಾನ್‍, ಎ.ಆರ್. ಮುರುಗದಾಸ್‍ ನಿರ್ದೇಶನದ ‘ಸಿಕಂದರ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ವೇಳೆಗೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್‍ ಖಾನ್‍ಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಮಿಕ್ಕಂತೆ ಸುನೀಲ್‍ ಶೆಟ್ಟಿ, ಸತ್ಯರಾಜ್‍, ಪ್ರತೀಕ್‍ ಬಬ್ಬರ್‍ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

6 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

9 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

10 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

12 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

17 hours ago