ಮನರಂಜನೆ

ಶಾರೂಖ್‍ ಆಯ್ತು ಈಗ ಸಲ್ಮಾನ್‍ ಖಾನ್‍ಗೆ ಅಟ್ಲಿ ನಿರ್ದೇಶನ

ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ, ಬಾಲಿವುಡ್‍ ನಟ ಶಾರೂಖ್‍ ಖಾನ್‍ ಅಭಿನಯದಲ್ಲಿ ‘ಪಠಾನ್‍’ ಎಂಬ ಚಿತ್ರ ನಿರ್ದೇಶಿಸಿದ್ದು, ಆ ಚಿತ್ರ ದೊಡ್ಡ ಯಶಸ್ಸು ಪಡೆದಿದ್ದು, ಈಗ ಹಳೇ ಸುದ್ದಿ. ‘ಜವಾನ್‍’ ನಂತರ ಅಟ್ಲಿ ಮುಂದಿನ ನಡೆಯೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರು ಇನ್ನೊಂದು ಹಿಂದಿ ಚಿತ್ರವನ್ನು ನಿರ್ದೇಶಿಸುತ್ತಾರೋ ಅಥವಾ ತಮಿಳಿನತ್ತ ವಾಪಸ್ಸು ಬರುತ್ತಾರೋ ಎಂಬ ಕುತೂಹಲ ಇತ್ತು.

ಆ ಕುತೂಹಲಕ್ಕೆ ಈಗ ಕೊನೆಗೂ ಉತ್ತರ ಸಿಕ್ಕಿದೆ. ಶಾರೂಖ್‍ ಖಾನ್‍ ನಂತರ ಇದೀಗ ಅಟ್ಲಿ, ಸಲ್ಮಾನ್ ಖಾನ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ವಿಶೇಷವೆಂದರೆ,, ಈ ಚಿತ್ರದಲ್ಲಿ ಕಮಲ್‍ ಹಾಸನ್‍ ಸಹ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇದೊಂದು ಆ್ಯಕ್ಷನ್‍ ಚಿತ್ರವಾಗಿದ್ದು 2025ರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್‍ ಕೆಲಸಗಳು ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನಷ್ಟು ಮಾಹಿತಿ ನೀಡಲಿದೆ ಎಂದು ಹೇಳಲಾಗಿದೆ.

ಈ ಚಿತ್ರದ ಒಂದು ಸೆಟ್‍ಗೆ 15 ಕೋಟಿ ರೂ ಖರ್ಚು ಮಾಡಲಾಗುತ್ತಿದೆಯಂತೆ. ಚಿತ್ರದಲ್ಲಿ ಮುಂಬೈನ ಧಾರಾವಿ ಮತ್ತು ಮಾತುಂಗ ಪ್ರದೇಶಗಳ ನಿರ್ಮಾಣ ಮಾಡಲಾಗುತ್ತಿದ್ದು, ಆ ನಂತರ ಚಿತ್ರಕ್ಕಾಗಿ ಭವ್ಯ ಅರಮನೆಯ ಸೆಟ್‍ನ್ನು ಸಹ ಹಾಕಲಾಗುತ್ತದಂತೆ.

ಸದ್ಯ ಸಲ್ಮಾನ್‍ ಖಾನ್‍, ಎ.ಆರ್. ಮುರುಗದಾಸ್‍ ನಿರ್ದೇಶನದ ‘ಸಿಕಂದರ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವು ಮುಂದಿನ ಈದ್ ವೇಳೆಗೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್‍ ಖಾನ್‍ಗೆ ನಾಯಕಿಯಾಗಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದು, ಮಿಕ್ಕಂತೆ ಸುನೀಲ್‍ ಶೆಟ್ಟಿ, ಸತ್ಯರಾಜ್‍, ಪ್ರತೀಕ್‍ ಬಬ್ಬರ್‍ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

14 mins ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

9 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

13 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

13 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

13 hours ago