ಮನರಂಜನೆ

‘ಬಲರಾಮನ’ ಜೊತೆಯಾದ ಅತುಲ್ ಕುಲಕರ್ಣಿ ಮತ್ತು ಆಶಿಶ್‍ ವಿದ್ಯಾರ್ಥಿ

2007ರಲ್ಲಿ ಬಿಡುಗಡೆಯಾದ ‘ಆ ದಿನಗಳು’ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ, ಡಾನ್‍ ಜಯರಾಜ್‍ ಪಾತ್ರದಲ್ಲಿ ನಟಿಸಿದರೆ, ‘ಅಗ್ನಿ’ ಶ್ರೀಧರ್‍ ಪಾತ್ರದಲ್ಲಿ ಅತುಲ್‍ ಕುಲಕರ್ಣಿ ನಟಿಸಿದ್ದರು. ಆ ಚಿತ್ರದ ನಂತರ ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿರಲಿಲ್ಲ.

ಈಗ ಬಹಳ ವರ್ಷಗಳ ನಂತರ ವಿನೋದ್‍ ಪ್ರಭಾಕರ್‍ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಇಬ್ಬರೂ ಜೊತೆಯಾಗಿ ನಟಿಸಿದ್ದಾರೆ. ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಇಬ್ಬರೂ ಬಹುಭಾಷಾ ನಟರು. ಇಬ್ಬರೂ ಕನ್ನಡದವಲ್ಲದೆ ಬೇರೆ ಭಾಷೆಗಳಲ್ಲೂ ನಟಿಸಿದವರು. ಈಗ ಕನ್ನಡ ಚಿತ್ರದಲ್ಲಿ ಅವರಿಬ್ಬರೂ ಜೊತೆಯಾಗುತ್ತಿರುವುದು ವಿಶೇಷ.

‘ಆ ದಿನಗಳು’ ಚಿತ್ರವು ನೈಜ ಘಟನೆಗಳನ್ನಾಧರಿಸಿದ ಚಿತ್ರವಾಗಿತ್ತು. ಆದರೆ, ‘ಬಲರಾಮನ ದಿನಗಳು’ 80ರ ದಶಕದಲ್ಲಿ ನಡೆಯುವ ಒಂದು ಕಾಲ್ಪನಿಕ ಕಥೆಯಾಗಿದೆ. ಇದು ಸಹ ಒಂದು ರೌಡಿಸಂ ಕಥೆಯಾಗಿದ್ದು, ಯಾವುದೇ ನೈಜ ಘಟನೆಯನ್ನಾಧರಿಸಿದ ಒಂದು ಕಾಲ್ಪನಿಕ ಕಥೆಯಂತೆ. ಈ ಚಿತ್ರವು ಕಳೆದ ವರ್ಷವೇ ಘೋಷಣೆಯಾಗಿತ್ತು. ಇದೀಗ ಮೈಸೂರಿನಲ್ಲಿ ಸತತವಾಗಿ ಚಿತ್ರೀಕರಣ ನಡೆಯುತ್ತಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಮುಗಿಯಲಿದೆ. ಇತ್ತೀಚೆಗೆ ನಡೆದ ಚಿತ್ರೀಕರಣದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಇಬ್ಬರೂ ವಿನೋದ್‍ ಪ್ರಭಾಕರ್‍ ಜೊತೆಯಾಗಿ ನಟಿಸಿದ್ದಾರೆ.

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರ ಚೊಚ್ಚಲ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ‘ಆ ದಿನಗಳು’ ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ‌‌.

1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ.

ಭೂಮಿಕಾ

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago