ಮನರಂಜನೆ

ನಟಿ ಸರೋಜಾದೇವಿ ಹೆಸರಿನಲ್ಲಿ ಪ್ರಶಸ್ತಿ ಘೋಷಣೆ

ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ನಟಿ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ ಮಾಡಿದೆ.

ಈ ಕುರಿತು ಬುಧವಾರ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಪ್ರತಿವರ್ಷ ಇನ್ನು ಮುಂದೆ ಬಿ.ಸರೋಜಾ ದೇವಿ ಗೌರವಾರ್ಥವಾಗಿ ಅಭಿನಯ ಸರಸ್ವತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದೆ.

ಪ್ರಶಸ್ತಿಯು ರೂ. 1 ಲಕ್ಷ ರೂ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷಾ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಅದನ್ನು ಪರಿಗಣಿಸಿ ಅವರು ಪಡೆದಿದ್ದ ಅಭಿನಯ ಸರಸ್ಕೃತಿ ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಲಾಗಿದೆ.

ಕನ್ನಡ, ಹಿಂದಿ, ತಮಿಳು, ಹಾಗೂ ತೆಲುಗು ಸೇರಿದಂತೆ ಒಟ್ಟು ನಾಲ್ಕು ಭಾಷೆಗಳಲ್ಲಿ ನಟಿಸಿದ್ದ ಬಿ ಸರೋಜಿದೇವಿ ಅವರಿಗೆ ಅಭಿನಯ ಸರಸ್ವತಿ ಎಂಬ ಬಿರುದನ್ನು ನೀಡಲಾಗಿತ್ತು. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಇತ್ತೀಚಿಗಷ್ಟೇ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ನಾಗರೀಕ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿತ್ತು. ಸುಮಾರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬಿ ಸರೋಜಾ ದೇವಿಯವರು ವಯೋಸಹಜ ಕಾಯಿಲೆಯಿಂದ ಇತ್ತೀಚಿಗೆ ನಿಧನರಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

53 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

55 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

57 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

59 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago