ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್ ಕುಮಾರ್. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ, ಚಿತ್ರರಂಗದಲ್ಲಿ ‘ಅಯೋಗ್ಯ’ ಮಹೇಶ್ ಎಂದೇ ಜನಪ್ರಿಯರು. ಇದೀಗ ಮಹೇಶ್ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿದ್ದಾರೆ.
ಕಳೆದ ವರ್ಷದ ಸ್ವಲ್ಪ ದುಡ್ಡು ನೋಡಿದ ಚಿತ್ರವೆಂದರೆ, ಅದು ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’. ಸದ್ಯ, ‘ಲಕ್ಷ್ಮಿ ಪುತ್ರ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಚಿಕ್ಕಣ್ಣ, ಅದಾದ ಬಳಿಕ ಮಹೇಶ್ ನಿರ್ದೇಶನದ ದೇಸಿ ಸೊಗಡಿನ ಚಿತ್ರದಲ್ಲಿ ನಟಿಸಲಿದ್ದಾರೆ. ಇದು ಮಹೇಶ್ ನಿರ್ದೇಶನದ ನಾಲ್ಕನೇ ಚಿತ್ರವಾಗಿದ್ದು, ಚಿತ್ರಕ್ಕೆ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ.
ಸದ್ಯ ‘ಅಯೋಗ್ಯ 2’ ಚಿತ್ರದ ಚಿತ್ರೀಕರಣವನ್ನು ಬಹುತೇಕ ಮುಗಿಸಿರುವ ಮಹೇಶ್, ಇದೀಗ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಇಷ್ಟರಲ್ಲಿ ಚಿತ್ರದ ಬಿಡುಗಡೆ ಆಗಬೇಕಿತ್ತು. ಆಗಸ್ಟ್ 15ರಂದು ಚಿತ್ರ ಬಿಡುಗಡೆ ಎಂದು ಮಹೇಶ್ ಕಳೆದ ವರ್ಷವೇ ಹೇಳಿದ್ದರು. ಕಾರಣಾಂತರಗಳಿಂದ ಚಿತ್ರ ತಡವಾಗಿ, ಇನ್ನಷ್ಟೇ ಬಿಡುಗಡೆಯಾಗಿದ್ದಾರೆ.
ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರವನ್ನು ನಿರ್ಮಿಸಿದ್ದ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಚಿತ್ರದ ಮುಹೂರ್ತ ಅಕ್ಟೋಬರ್ ತಿಂಗಳಲ್ಲಿ ನೆರವೇರಲಿದ್ದು, ಅದೇ ದಿನ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.
ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ವಿ. ಹರಿಕೃಷ್ಣ ಸಂಗೀತ, ಸುಧಾಕರ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮಾಸ್ತಿ, ರಘು ನಿಡುವಳ್ಳಿ ಹಾಗೂ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…