ಮನರಂಜನೆ

‘ಅಯೋಗ್ಯ’ ಮಹೇಶ್‍ ಹೊಸ ಚಿತ್ರಕ್ಕೆ ಚಿಕ್ಕಣ್ಣ ಹೀರೋ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್‍ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್‍ ಕುಮಾರ್‍. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ, ಚಿತ್ರರಂಗದಲ್ಲಿ ‘ಅಯೋಗ್ಯ’ ಮಹೇಶ್‍ ಎಂದೇ ಜನಪ್ರಿಯರು. ಇದೀಗ ಮಹೇಶ್‍ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿದ್ದಾರೆ.

ಕಳೆದ ವರ್ಷದ ಸ್ವಲ್ಪ ದುಡ್ಡು ನೋಡಿದ ಚಿತ್ರವೆಂದರೆ, ಅದು ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’. ಸದ್ಯ, ‘ಲಕ್ಷ್ಮಿ ಪುತ್ರ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಚಿಕ್ಕಣ್ಣ, ಅದಾದ ಬಳಿಕ ಮಹೇಶ್‍ ನಿರ್ದೇಶನದ ದೇಸಿ ಸೊಗಡಿನ ಚಿತ್ರದಲ್ಲಿ ನಟಿಸಲಿದ್ದಾರೆ. ಇದು ಮಹೇಶ್ ‍ನಿರ್ದೇಶನದ ನಾಲ್ಕನೇ ಚಿತ್ರವಾಗಿದ್ದು, ಚಿತ್ರಕ್ಕೆ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ.

ಸದ್ಯ ‘ಅಯೋಗ್ಯ 2’ ಚಿತ್ರದ ಚಿತ್ರೀಕರಣವನ್ನು ಬಹುತೇಕ ಮುಗಿಸಿರುವ ಮಹೇಶ್‍, ಇದೀಗ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಇಷ್ಟರಲ್ಲಿ ಚಿತ್ರದ ಬಿಡುಗಡೆ ಆಗಬೇಕಿತ್ತು. ಆಗಸ್ಟ್ 15ರಂದು ಚಿತ್ರ ಬಿಡುಗಡೆ ಎಂದು ಮಹೇಶ್ ‍ಕಳೆದ ವರ್ಷವೇ ಹೇಳಿದ್ದರು. ಕಾರಣಾಂತರಗಳಿಂದ ಚಿತ್ರ ತಡವಾಗಿ, ಇನ್ನಷ್ಟೇ ಬಿಡುಗಡೆಯಾಗಿದ್ದಾರೆ.

ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರವನ್ನು ನಿರ್ಮಿಸಿದ್ದ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಚಿತ್ರದ ಮುಹೂರ್ತ ಅಕ್ಟೋಬರ್ ತಿಂಗಳಲ್ಲಿ ನೆರವೇರಲಿದ್ದು, ಅದೇ ದಿನ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.

ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ವಿ. ಹರಿಕೃಷ್ಣ ಸಂಗೀತ, ಸುಧಾಕರ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮಾಸ್ತಿ, ರಘು ನಿಡುವಳ್ಳಿ ಹಾಗೂ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

15 mins ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

21 mins ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

26 mins ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

3 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

6 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

7 hours ago