ಮನರಂಜನೆ

ಕರ್ನಾಟಕದ ಸಂಸ್ಕೃತಿ, ಸಂಪ್ರದಾಯವನ್ನು ಅನಾವರಣಗೊಳಿಸುವ ‘ಅಯ್ಯನ ಮನೆ’

ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್‍ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್‍ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಈ ಸಾಲಿಗೆ ಇದೀಗ ‘ಅಯ್ಯನ ಮನೆ’ ಎಂಬ ಹೊಸ ಸರಣಿಯು ಸೇರಿದೆ.

ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಮಿನಿ ವೆಬ್ ಸೀರೀಸ್ ಪರಿಚಯಿಸಿದೆ. ZEE5ನಲ್ಲಿ ಸ್ಟ್ರೀಮ್‍ ಆಗುತ್ತಿರುವ ಮೊದಲ ಕನ್ನಡ ಮಿನಿ ವೆಬ್ ಸರಣಿಯನ್ನು ನಟಿ-ನಿರ್ದೇಶಕ ರಮೇಶ್ ಇಂದಿರಾ ನಿರ್ದೇಶನ ಮಾಡಿದ್ದಾರೆ. ಆ ಸರಣಿಗೆ ‘ಅಯ್ಯನ ಮನೆ’ ಎಂದು ಹೆಸರಿಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ.

ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಅಯ್ಯನ ಮನೆʼ ವೆಬ್‍ ಸರಣಿಯನ್ನು ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಚಿಕ್ಕಮಗಳೂರಿನ ‘ಅಯ್ಯನ ಮನೆ’ ಕುಟುಂಬದಲ್ಲಿ ಅಡಗಿರುವ ಸತ್ಯಗಳ ಸುತ್ತಕಥೆ ಸಾಗುತ್ತದೆ. ಇದೊಂದು ಮಿಸ್ಟ್ರಿ ಕಥೆಯಾಗಿದ್ದು, ಪ್ರೇಕ್ಷಕರನ್ನು ಪ್ರತಿ ಕ್ಷಣ ಕುತೂಹಲಕ್ಕೀಡು ಮಾಡುತ್ತದೆ.

ಈ ಸರಣಿಯ ಕುರಿತು ಮಾತನಾಡುವ ರಮೇಶ್ ಇಂದಿರಾ, ‘ಅಯ್ಯನ ಮನೆ’ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಫ್ಯಾಮಿಲಿ ಕಥೆಯೊನ್ನೊಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ಅನಾವರಣ ಮಾಡುತ್ತದೆ. ‘ಅಯ್ಯನ ಮನೆ’ ವೆಬ್ ಸರಣಿ ಪ್ರೇಕ್ಷಕರನ್ನು ಸೀಟಿನ ತುದಿಗೆ ಕೂರುವಂತೆ ಮಾಡುತ್ತದೆ’ ಎಂದಿದ್ದಾರೆ.

ಏಳು ಎಪಿಸೋಡ್ ಹೊಂದಿರುವ ಈ ಸರಣಿಯಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಮುಂತಾದವರು ಅಭಿನಯಿಸಿದ್ದಾರೆ. ಇದು ಭಯ, ನಂಬಿಕೆ ಮತ್ತು ವಿಧಿಯ ಸುತ್ತ ಸುತ್ತುವ ಕಥೆಯಾಗಿದ್ದು, ಇದೇ ತಿಂಗಳ 25ರಿಂದ ZEE5ನಲ್ಲಿ ಸ್ಟ್ರೀಮಿಂಗ್ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

12 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

12 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

13 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

13 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

14 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

14 hours ago