ಮನರಂಜನೆ

ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದ್ದು, ನವೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ.

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ರಕ್ತ ಕಾಶ್ಮೀರ’ ಚಿತ್ರವು ಬಾಬು ಅವರ ವೃತ್ತಿಬದುಕಿನ ವಿಶೇಷ ಚಿತ್ರ ಎಂದರೆ ತಪ್ಪಿಲ್ಲ. ನಿರ್ದೇಶಕರಾಗಿ 50 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲೇ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಉಪೇಂದ್ರ, ರಮ್ಯಾ, ಮುಖೇಶ್‍ ರಿಷಿ, ರಿಯಾಜ್‍ ಖಾನ್‍ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಗುರುಕಿರಣ್‍ ಸಂಗೀತವಿದೆ. ಚಿತ್ರವನ್ನು ಕಾಶ್ಮೀರದಲ್ಲೇ ಚಿತ್ರೀಕರಣ ಮಾಡಲಾಗಿದೆ.

ಈ ವರ್ಷ ನನಗೆ ಬಹಳ ವಿಶೇಷ ಎನ್ನುವ ಬಾಬು, ‘ನಾನು ನಿರ್ದೇಶಕನಾಗಿ 50 ವರ್ಷಗಳಾಗಿದೆ ಹಾಗೂ ನಾನು ನಿರ್ದೇಶಿಸಿರುವ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದವಾಗಿದೆ. ಅದರಲ್ಲಿ ಮೊದಲು ‘ರಕ್ತ ಕಾಶ್ಮೀರ’ ಚಿತ್ರ ಬಿಡುಗಡೆಯಾಗುತ್ತಿದೆ. ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಹಾಗೂ ಭಯೋತ್ಪಾದನೆಯ ವಿರುದ್ಧ ಸಮರ ಸಾರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ‌‌‌. ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರ ಸಿಂಧೂ ನದಿ ದಂಡೆಯಲ್ಲೇ ಚಿತ್ರೀಕರಣ ಮಾಡಿದ್ದೇವೆ. ಭಯದ ವಾತವಾರಣವಿದ್ದರೂ ಚಿತ್ರೀಕರಣ ಅಂದುಕೊಂಡ ಹಾಗೆ ಆಯಿತು. ಉಪೇಂದ್ರ ಅವರು ಈ ಚಿತ್ರದಲ್ಲಿ ಎರಡು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಮ್ಯ ಅವರು ಆರು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ಕೈದು ಜನ ಬಾಲ ಕಲಾವಿದರು ಸಹ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಉಪೇಂದ್ರ ಅವರು ಮಕ್ಕಳಿಗೆ ದೇಶದ ಕುರಿತು ಜಾಗೃತಿ ಮೂಡಿಸುತ್ತಾರೆ‌‌. ಹಾಗೆ ಅವರ ಮೂಲಕವೇ ಮಹತ್ತರ ಕೆಲಸವನ್ನು ಮಾಡಿಸುತ್ತಾರೆ’ ಎಂದರು.

ಇದನ್ನು ಓದಿ: ನವೆಂಬರ್.06ಕ್ಕೆ ಬರಲಿದೆ ಉಪೇಂದ್ರ, ರಮ್ಯಾ ಅಭಿನಯದ ‘ರಕ್ತ ಕಾಶ್ಮೀರ’

ಚಿತ್ರದ ಮತ್ತೊಂದು ವಿಶೇಷ ಎಂದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡದ 14 ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿದ್ದಾರೆ. ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈ ಜಗದೀಶ್, ಆದಿತ್ಯ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕನ್ನಡದ ದಿಗ್ಗಜ ನಾಯಕರು ಒಂದೇ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು ಆರು ದಿನಗಳ ಕಾಲ ಅವರ ಭಾಗದ ಚಿತ್ರೀಕರಣ ಮಾಡಿದ್ದೇವೆ. 20 ನಿಮಿಗಳ ಕಾಲ ಅವರು ತೆರೆಯ ಮೇಲೆ ಇರುತ್ತಾರೆ’ ಎಂದರು.

ಬಾಬು ಅವರ ಮಗ ಮತ್ತು ನಟ ಆದಿತ್ಯ, ಈ ಚಿತ್ರದ ನಿರ್ಮಾಪಕರು. ‘ಕನ್ನಡ ಚಿತ್ರರಂಗದ ಜನಪ್ರಿಯ ನಾಯಕರು ನಮ್ಮ ಚಿತ್ರದಲ್ಲಿ ನಟಿಸಿರುವುದು ನಿಜಕ್ಕೂ ಹೆಮ್ಮೆ. ಆರು ದಿನಗಳ ಕಾಲ ಅಷ್ಟು ಜನ ಕಲಾವಿದರೊಂದಿಗೆ ಕಾಲ ಕಳೆದಿದ್ದು ಮರೆಯಲಾಗದ ಅನುಭವ’ ಎಂದರು ಆದಿತ್ಯ.

ಈ ಚಿತ್ರವನನ್ನು ರಾಜ್ಯಾದ್ಯಂತ ಮಾರ್ಸ್ ಸುರೇಶ್ ವಿತರಣೆ ಮಾಡುತ್ತಿದ್ದಾರೆ. ‘ನಾನು ಈ ಹಿಂದೆ ಬಾಬು ಅವರ ಕೆಲವು ಚಿತ್ರಗಳನ್ನು ಹಂಚಿಕೆ ಮಾಡಿದ್ದೆ. ಆದರೆ ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿರುವುದು ಇದೇ ಮೊದಲು’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

17 mins ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

18 mins ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

19 mins ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

19 mins ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

21 mins ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

4 hours ago