ಮನರಂಜನೆ

ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದ್ದು, ನವೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ.

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ರಕ್ತ ಕಾಶ್ಮೀರ’ ಚಿತ್ರವು ಬಾಬು ಅವರ ವೃತ್ತಿಬದುಕಿನ ವಿಶೇಷ ಚಿತ್ರ ಎಂದರೆ ತಪ್ಪಿಲ್ಲ. ನಿರ್ದೇಶಕರಾಗಿ 50 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲೇ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಉಪೇಂದ್ರ, ರಮ್ಯಾ, ಮುಖೇಶ್‍ ರಿಷಿ, ರಿಯಾಜ್‍ ಖಾನ್‍ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಗುರುಕಿರಣ್‍ ಸಂಗೀತವಿದೆ. ಚಿತ್ರವನ್ನು ಕಾಶ್ಮೀರದಲ್ಲೇ ಚಿತ್ರೀಕರಣ ಮಾಡಲಾಗಿದೆ.

ಈ ವರ್ಷ ನನಗೆ ಬಹಳ ವಿಶೇಷ ಎನ್ನುವ ಬಾಬು, ‘ನಾನು ನಿರ್ದೇಶಕನಾಗಿ 50 ವರ್ಷಗಳಾಗಿದೆ ಹಾಗೂ ನಾನು ನಿರ್ದೇಶಿಸಿರುವ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದವಾಗಿದೆ. ಅದರಲ್ಲಿ ಮೊದಲು ‘ರಕ್ತ ಕಾಶ್ಮೀರ’ ಚಿತ್ರ ಬಿಡುಗಡೆಯಾಗುತ್ತಿದೆ. ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಹಾಗೂ ಭಯೋತ್ಪಾದನೆಯ ವಿರುದ್ಧ ಸಮರ ಸಾರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ‌‌‌. ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರ ಸಿಂಧೂ ನದಿ ದಂಡೆಯಲ್ಲೇ ಚಿತ್ರೀಕರಣ ಮಾಡಿದ್ದೇವೆ. ಭಯದ ವಾತವಾರಣವಿದ್ದರೂ ಚಿತ್ರೀಕರಣ ಅಂದುಕೊಂಡ ಹಾಗೆ ಆಯಿತು. ಉಪೇಂದ್ರ ಅವರು ಈ ಚಿತ್ರದಲ್ಲಿ ಎರಡು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಮ್ಯ ಅವರು ಆರು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ಕೈದು ಜನ ಬಾಲ ಕಲಾವಿದರು ಸಹ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಉಪೇಂದ್ರ ಅವರು ಮಕ್ಕಳಿಗೆ ದೇಶದ ಕುರಿತು ಜಾಗೃತಿ ಮೂಡಿಸುತ್ತಾರೆ‌‌. ಹಾಗೆ ಅವರ ಮೂಲಕವೇ ಮಹತ್ತರ ಕೆಲಸವನ್ನು ಮಾಡಿಸುತ್ತಾರೆ’ ಎಂದರು.

ಇದನ್ನು ಓದಿ: ನವೆಂಬರ್.06ಕ್ಕೆ ಬರಲಿದೆ ಉಪೇಂದ್ರ, ರಮ್ಯಾ ಅಭಿನಯದ ‘ರಕ್ತ ಕಾಶ್ಮೀರ’

ಚಿತ್ರದ ಮತ್ತೊಂದು ವಿಶೇಷ ಎಂದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡದ 14 ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿದ್ದಾರೆ. ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈ ಜಗದೀಶ್, ಆದಿತ್ಯ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕನ್ನಡದ ದಿಗ್ಗಜ ನಾಯಕರು ಒಂದೇ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಾರು ಆರು ದಿನಗಳ ಕಾಲ ಅವರ ಭಾಗದ ಚಿತ್ರೀಕರಣ ಮಾಡಿದ್ದೇವೆ. 20 ನಿಮಿಗಳ ಕಾಲ ಅವರು ತೆರೆಯ ಮೇಲೆ ಇರುತ್ತಾರೆ’ ಎಂದರು.

ಬಾಬು ಅವರ ಮಗ ಮತ್ತು ನಟ ಆದಿತ್ಯ, ಈ ಚಿತ್ರದ ನಿರ್ಮಾಪಕರು. ‘ಕನ್ನಡ ಚಿತ್ರರಂಗದ ಜನಪ್ರಿಯ ನಾಯಕರು ನಮ್ಮ ಚಿತ್ರದಲ್ಲಿ ನಟಿಸಿರುವುದು ನಿಜಕ್ಕೂ ಹೆಮ್ಮೆ. ಆರು ದಿನಗಳ ಕಾಲ ಅಷ್ಟು ಜನ ಕಲಾವಿದರೊಂದಿಗೆ ಕಾಲ ಕಳೆದಿದ್ದು ಮರೆಯಲಾಗದ ಅನುಭವ’ ಎಂದರು ಆದಿತ್ಯ.

ಈ ಚಿತ್ರವನನ್ನು ರಾಜ್ಯಾದ್ಯಂತ ಮಾರ್ಸ್ ಸುರೇಶ್ ವಿತರಣೆ ಮಾಡುತ್ತಿದ್ದಾರೆ. ‘ನಾನು ಈ ಹಿಂದೆ ಬಾಬು ಅವರ ಕೆಲವು ಚಿತ್ರಗಳನ್ನು ಹಂಚಿಕೆ ಮಾಡಿದ್ದೆ. ಆದರೆ ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿರುವುದು ಇದೇ ಮೊದಲು’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago