Nanna Magale superstar
ಕೆಲವು ವರ್ಷಗಳ ಹಿಂದೆ ‘ನನ್ ಮಗಳೇ ಹೀರೋಯಿನ್’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ಸೆಟ್ಟೇರಿದೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ‘ಸೀತಾರಾಮ’ದಲ್ಲಿ ನಟಿಸಿ, ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್, ‘ನನ್ನ ಮಗಳೇ ಸೂಪರ್ ಸ್ಟಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶೇಷಾದ್ರಿಪುರದ ಎ.ವಿ. ವರದಾಚಾರ್ ಕಲಾಕ್ಷೇತ್ರದಲ್ಲಿ ನೆರವೇರಿತು. ಸಾಹಿತಿ ಬಿ.ಆರ್.ಲಕ್ಷ್ಮಣರಾವ್, ಪರಿಸರ ಪ್ರೇಮಿ ರೇವತಿ ಕಾಮತ್ ಹಾಗೂ ನಿರ್ದೇಶಕ ನಂಜುಂಡೇಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಹನಿ ಫಿಲಂ ಮೇಕರ್ಸ್ ಲಾಂಛನದಲ್ಲಿ ಎನ್.ಎ.ಶಿವಕುಮಾರ್ (ಕುಮಾರ್ ನೊಣವಿನಕೆರೆ) ನಿರ್ಮಿಸುತ್ತಿರುವ ಈ ಚಿತ್ರವನ್ನು ಆಯುರ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.
ಅಪ್ಪ – ಅಮ್ಮನಿಗೆ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಈ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ, ಮಕ್ಕಳಿಗೂ ಅವರದೇ ಆಸೆ ಇರುತ್ತದೆ. ತಂದೆ-ತಾಯಿ ತಮ್ಮ ಆಸೆಯನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಿದರೆ, ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥೆಯಂತೆ.
ಇದುವರೆಗೂ ಸಂಕಲನಕಾರರಾಗಿ ಕೆಲಸ ಮಾಡಿದ್ದ ಆಯುರ್ಗೆ ನಿರ್ದೇಶಕರಾಗಿ ಇದು ಮೊದಲ ಚಿತ್ರ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಆಯುರ್, ‘ಮಕ್ಕಳಿಗೆ ಅವರ ಆಸೆ ಪೂರೈಸುವುದಕ್ಕೆ ಬಿಡಿ ಎಂಬ ಸಂದೇಶ ಈ ಚಿತ್ರದಲ್ಲಿದೆ. ಈ ಚಿತ್ರದಲ್ಲಿ ರಿಯಾಲಿಟಿ ಶೋ ಕಥೆ ಕೂಡ ಇದೆ. ಬೆಂಗಳೂರಿನಲ್ಲೇ 30 ದಿನಗಳ ಚಿತ್ರೀಕರಣ ನಡೆಯಲಿದೆ. ನಮ್ಮ ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರು ಹಾಡುಗಳನ್ನು ಬಿ.ಆರ್.ಲಕ್ಷ್ಮಣರಾವ್ ಅವರೆ ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ’ ಎಂದರು.
ಇದುವರೆಗೂ ವಿಲನ್ ಪಾತ್ರಗಳಲ್ಲೇ ಹೆಚ್ಚಾಗಿ ಗುರುತಿಸಿಕೊಂಡಿದ್ದ ಚೆಲುವರಾಜು, ಈ ಚಿತ್ರದಲ್ಲಿ ಇದುವರೆಗೂ ಮಾಡದ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರಂತೆ. ಅವರ ಪತ್ನಿಯಾಗಿ ಸಂಭ್ರಮಶ್ರೀ ನಟಿಸುತ್ತಿದ್ದು, ಮಗಳಾಗಿ ರೀತು ಸಿಂಗ್ ಅಭಿನಯಿಸುತ್ತಿದ್ದಾರೆ. ಪರಿಸರವಾದಿ ರೇವತಿ ಕಾಮತ್ ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…