ಮನರಂಜನೆ

ಹಿರಿತೆರೆಗೆ ಬೇಬಿ ರೀತು ಸಿಂಗ್‍: ‘ನನ್ನ ಮಗಳೇ ಸೂಪರ್ ಸ್ಟಾರ್‍’ಗೆ ನಾಯಕಿ

ಕೆಲವು ವರ್ಷಗಳ ಹಿಂದೆ ‘ನನ್‍ ಮಗಳೇ ಹೀರೋಯಿನ್‍’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ಸೆಟ್ಟೇರಿದೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ‘ಸೀತಾರಾಮ’ದಲ್ಲಿ ನಟಿಸಿ, ನೋಡುಗರ ಮನ ಗೆದ್ದಿದ್ದ ಬೇಬಿ ರೀತು ಸಿಂಗ್, ‘ನನ್ನ ಮಗಳೇ ಸೂಪರ್ ಸ್ಟಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶೇಷಾದ್ರಿಪುರದ ಎ.ವಿ. ವರದಾಚಾರ್ ಕಲಾಕ್ಷೇತ್ರದಲ್ಲಿ ನೆರವೇರಿತು. ಸಾಹಿತಿ ಬಿ.ಆರ್.ಲಕ್ಷ್ಮಣರಾವ್, ಪರಿಸರ ಪ್ರೇಮಿ ರೇವತಿ ಕಾಮತ್ ಹಾಗೂ ನಿರ್ದೇಶಕ ನಂಜುಂಡೇಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಹನಿ ಫಿಲಂ ಮೇಕರ್ಸ್ ಲಾಂಛನದಲ್ಲಿ ಎನ್.ಎ.ಶಿವಕುಮಾರ್ (ಕುಮಾರ್ ನೊಣವಿನಕೆರೆ) ನಿರ್ಮಿಸುತ್ತಿರುವ ಈ ಚಿತ್ರವನ್ನು ಆಯುರ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಅಪ್ಪ – ಅಮ್ಮನಿಗೆ‌ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಈ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ, ಮಕ್ಕಳಿಗೂ ಅವರದೇ ಆಸೆ ಇರುತ್ತದೆ. ತಂದೆ-ತಾಯಿ ತಮ್ಮ ಆಸೆಯನ್ನು ಮಕ್ಕಳ ಮೇಲೆ ಬಲವಂತವಾಗಿ ಹೇರಿದರೆ, ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥೆಯಂತೆ.

ಇದುವರೆಗೂ ಸಂಕಲನಕಾರರಾಗಿ ಕೆಲಸ ಮಾಡಿದ್ದ ಆಯುರ್‍ಗೆ ನಿರ್ದೇಶಕರಾಗಿ ಇದು ಮೊದಲ ಚಿತ್ರ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಆಯುರ್‍, ‘ಮಕ್ಕಳಿಗೆ ಅವರ ಆಸೆ ಪೂರೈಸುವುದಕ್ಕೆ ಬಿಡಿ ಎಂಬ ಸಂದೇಶ ಈ ಚಿತ್ರದಲ್ಲಿದೆ. ಈ ಚಿತ್ರದಲ್ಲಿ ರಿಯಾಲಿಟಿ ಶೋ ಕಥೆ ಕೂಡ ಇದೆ. ಬೆಂಗಳೂರಿನಲ್ಲೇ 30 ದಿನಗಳ ಚಿತ್ರೀಕರಣ ನಡೆಯಲಿದೆ. ನಮ್ಮ ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರು ಹಾಡುಗಳನ್ನು ಬಿ.ಆರ್.ಲಕ್ಷ್ಮಣರಾವ್ ಅವರೆ ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ’ ಎಂದರು.

ಇದುವರೆಗೂ ವಿಲನ್ ಪಾತ್ರಗಳಲ್ಲೇ ಹೆಚ್ಚಾಗಿ ಗುರುತಿಸಿಕೊಂಡಿದ್ದ ಚೆಲುವರಾಜು, ಈ ಚಿತ್ರದಲ್ಲಿ ಇದುವರೆಗೂ ಮಾಡದ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರಂತೆ. ಅವರ ಪತ್ನಿಯಾಗಿ ಸಂಭ್ರಮಶ್ರೀ ನಟಿಸುತ್ತಿದ್ದು, ಮಗಳಾಗಿ ರೀತು ಸಿಂಗ್‍ ಅಭಿನಯಿಸುತ್ತಿದ್ದಾರೆ. ಪರಿಸರವಾದಿ ರೇವತಿ ಕಾಮತ್‍ ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

7 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

7 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

8 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

8 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

9 hours ago