ಆಗಾಗ ತಮ್ಮ ಚಿತ್ರದ ಒಂದೊಂದು ಪಾತ್ರವನ್ನು ಪರಿಚಯಿಸುತ್ತಲೇ ಇದ್ದರು ನಿರ್ದೇಶಕ ಪಿ.ಸಿ.ಶೇಖರ್. ಆದರೆ, ತಮ್ಮ ನಿರ್ದೇಶನದ ‘BAD’ ಯಾವಾಗ ಬಿಡುಗಡೆ ಆಗುತ್ತದೆ ಎಂಬ ಸುಳಿವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಆ ಚಿತ್ರಕ್ಕೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದ್ದು, ‘BAD’ ಮಾರ್ಚ್.28ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.
ಈ ಹಿಂದೆ ‘ಪ್ರೀತಿಯ ರಾಯಭಾರಿ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ ಅಭಿನಯಿಸಿರುವ ‘BAD’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರವನ್ನು ವೆಂಕಟೇಶ್ ಗೌಡ ನಿರ್ಮಿಸುತ್ತಿದ್ದು, ನಕುಲ್ ಗೌಡ, ಮಾನ್ವಿತಾ ಅಲ್ಲದೆ ಹರೀಶ್, ಸಾಯಿಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್, ಅಶ್ವಿನಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಇದು ನನ್ನ ನಿರ್ದೇಶನದ 11ನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪಿ.ಸಿ.ಶೇಖರ್, ‘ಇದೊಂದು ವಿಭಿನ್ನ ಚಿತ್ರಕಥೆಯುಳ್ಳ ಚಿತ್ರ. ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ಈ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಚಿತ್ರ ಇದೇ ತಿಂಗಳ 28 ರಂದು ತೆರೆಗೆ ಬರಲಿದೆ ಎಂದರು.
ಈ ಚಿತ್ರಕ್ಕೆ ‘ಬ್ಯಾಡ್’ ಎಂಬ ಹೆಸರಿಡಲೂ ಕಾರಣವಿದೆ. ಇಲ್ಲಿ ನಾಯಕ, ನಾಯಕಿಯಷ್ಟೇ ಅಲ್ಲ, ಎಲ್ಲರೂ ವಿಲನ್ಗಳೇ ಆಗಿರುತ್ತಾರಂತೆ. ಅಕಿರಾ ಕುರುಸಾವಾ ನಿರ್ದೇಶನದ ಜಪಾನ್ ಚಿತ್ರ ರಾಶೋಮಾನ್ ಮಾದರಿಯಲ್ಲಿ ಈ ಚಿತ್ರ ಇರಲಿದ್ದು, ಒಂದೇ ಕಥೆಯನ್ನೇ ಹಲವು ದೃಷ್ಟಿಕೋನಗಳಲ್ಲಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗಿದೆ.
‘BAD’, ನಕುಲ್ ಗೌಡ ನಟಿಸಿರುವ ಎರಡನೇ ಚಿತ್ರ. ಈ ಚಿತ್ರದ ಕುರಿತು ಮಾತನಾಡುವ ನಕುಲ್, ‘ಪಿ.ಸಿ. ಶೇಖರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಮೋಸ ಆಗದಂತಹ ಚಿತ್ರವಿದು. ನನ್ನ ಪಾತ್ರ ಕೂಡ ವಿಭಿನ್ನವಾಗಿದೆ’ ಎಂದರು.
ಇದು ಶೇಖರ್ ಮತ್ತು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಜೋಡಿಯ ಒಂಬತ್ತನೇ ಚಿತ್ರ. ಅಷ್ಟೇ ಅಲ್ಲ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದರ ಜೊತೆಗೆ, ಸಂಕಲನವನ್ನೂ ಶೇಖರ್ ಅವರೇ ಮಾಡಿದ್ದಾರೆ. ಶೇಖರ್ ಅವರ ‘ರಾಗ’ ಹಾಗೂ ‘ದಿ ಟೆರರಿಸ್ಟ್’ ಚಿತ್ರಗಳಿಗೆ ಸಂಭಾಷಣೆ ರಚಿಸಿದ್ದ ಸಚಿನ್ ಬಿ. ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…