ಮನರಂಜನೆ

‘ರಾವಣ ರಾಜ್ಯದಲ್ಲಿ ನವದಂಪತಿ’ಗಳು; ನಿರ್ಮಾಪಕರಾದ ‘ಬಡವ ರಾಸ್ಕಲ್’ ನಿರ್ದೇಶಕ

ಧನಂಜಯ್‍ ಅಭಿನಯದ ‘ಬಡವ ರಾಸ್ಕಲ್‍’ ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ಗುರು, ಈಗ ಅದೇ ಧನಂಜಯ್‍ ಅಭಿನಯದಲ್ಲಿ ‘ಅಣ್ಣ ಫ್ರಮ್‍ ಮೆಕ್ಸಿಕೋ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಮಧ್ಯೆ, ಅವರು ನಿರ್ಮಾಪಕರಾಗಿದ್ದಾರೆ.

ಶಂಕರ್‍ ಗುರು, ಇದೀಗ ಧೀರಜ್‍ ಎಂ.ವಿ ಹಾಗೂ ವರುಣ್ ಗುರುರಾಜ್ ‍ಜೊತೆಗೆ ಸೇರಿ ಸದ್ದಿಲ್ಲದೆ ‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಎಂಬ ಚಿತ್ರ ನಿರ್ಮಿಸಿದ್ದಾರೆ. ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ಚಿತ್ರ ನಿರ್ಮಾಣವಾಗಿದೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.

‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಎಂಬ ಶೀರ್ಷಿಕೆಯೇ ಚಿತ್ರದ ಕಥೆ ಏನಿರಬಹುದು ಎಂಬ ಸೂಚನೆಯನ್ನು ಕೊಡುತ್ತದೆ. ಆದರೆ, ಚಿತ್ರತಂಡ ಚಿತ್ರದ ಬಗ್ಗೆ ಯಾವೊಂದು ಮಾಹಿತಿಯನ್ನೂ ಬಿಟ್ಟುಕೊಡುವುದಿಲ್ಲ. ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು ಎಂದಷ್ಟೇ ಹೇಳಿಕೊಂಡಿದೆ.

ಅಂದಹಾಗೆ, ‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಚಿತ್ರದ ಚಿತ್ರೀಕರಣ ಮುಗಿದಿದೆ. ಅರುಣ್ ಸೂರ್ಯ ಹಾಗೂ ‘ಡೊಳ್ಳು’, ‘ಶಾಖಾಹಾರಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರವನ್ನು ರಂಗ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗುರು ಪ್ರಸಾದ್ ಹಾಗೂ ಸುನೀಲ್‍ ಕುಮಾರ್‍ ದೇಸಾಯಿ ಅವರ ಜೊತೆಗೆ ಕೆಲಸ ಕಲಿತಿರುವ ರಂಗ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

‘ರಾವಣ ರಾಜ್ಯದಲ್ಲಿ ನವದಂಪತಿಗಳು’ ಚಿತ್ರಕ್ಕೆ ಸದ್ದಿಲ್ಲದೆ ಚಿತ್ರೀಕರಣ ಮುಗಿದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮೊದಲ ಹಂತವಾಗಿ ಚಿತ್ರದ ಮೊದಲ ಪೋಸ್ಟರ್‍ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ಅಭಿನಂದನ್ ಕಶ್ಯಪ್ ಸಂಗೀತ ಹಾಗೂ ವೀರೇಶ್‍ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

4 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

7 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

8 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

10 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

13 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

13 hours ago