ಮನರಂಜನೆ

ದೀಪಾವಳಿಗೆ ಬರ್ತಾನೆ ‘ಬಘೀರ’; ಅ. 17ಕ್ಕೆ ಮೊದಲ ಹಾಡು

ಡಿಸೆಂಬರ್‍ ಮೂರಕ್ಕೆ ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳಾಗುತ್ತವೆ. 2021ರಲ್ಲಿ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರವು ಬಿಡುಗಡೆಯಾಗಿತ್ತು. ಅದಕ್ಕೂ ಮೊದಲೇ ‘ಬಘೀರ’ ಚಿತ್ರದ ಘೋಷಣೆಯಾಗಿದ್ದರೂ, ಕಾರಣಾಂತರಗಳಿಂದ ತಡವಾಗಿ, ಇದೀಗ ಕೊನೆಗೂ ಅಕ್ಟೋಬರ್‍ 31ರಂದು ದೀಪಾವಳಿ ಪ್ರಯುಕ್ತ ಬಿಡುಗಡೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೊಂಬಾಳೆ ಫಿಲಂಸ್‍ ಸಂಸ್ಥೆಯಡಿ ವಿಜಯ್‍ ಕಿರಗಂದೂರು ನಿರ್ಮಿಸಿರುವ ‘ಬಘೀರ’ ಚಿತ್ರಕ್ಕೆ ‘ಕೆಜಿಎಫ್‌’ ಮತ್ತು ‘ಸಲಾರ್‌’ ಚಿತ್ರಗಳ ನಿರ್ದೇಶಕ ಪ್ರಶಾಂತ್‌ ನೀಲ್‌ ಕಥೆ ಬರೆದಿದ್ದಾರೆ ಎಂಬುದು ಇನ್ನೊಂದು ಬಲ. ಆಕ್ಷನ್‌ ಟೀಸರ್‌ ಮೂಲಕವೇ ನಿರೀಕ್ಷೆ ಮೂಡಿಸಿರುವ ಈ ಸಿನಿಮಾದ ಮೊದಲ ಹಾಡು ‘ರುಧೀರ ಧಾರಾ ಸಾಂಗ್‌’ ಅಕ್ಟೋಬರ್‌ 17ರ ಬೆಳಗ್ಗೆ 10:35ಕ್ಕೆ ಬಿಡುಗಡೆ ಆಗಲಿದೆ. ಈ ಹಾಡು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರದ ಕೆಲಸಗಳನ್ನು ಪ್ರಾರಂಭಿಸಲಿವೆ.

ಡಾಕ್ಟರ್‌ ಸೂರಿ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವ ‘ಬಘೀರ’ ಚಿತ್ರದಲ್ಲಿ ಪೊಲೀಸ್‌ ಅವತಾರದಲ್ಲಿ ಶ್ರೀಮುರಳಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್‌ ನಟಿಸಿದರೆ, ಇನ್ನುಳಿದಂತೆ ಪ್ರಕಾಶ್‌ ರೈ, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಗರುಡ ರಾಮ್, ಅಶ್ವಿನ್ ಹಾಸನ್‍, ರಘೂ ರಾಮನಕೊಪ್ಪ ಸೇರಿ ಇನ್ನೂ ಹತ್ತಾರು ಕಲಾವಿದರು ನಟಿಸಿದ್ದಾರೆ.

‘ಬಘೀರ’ ಚಿತ್ರಕ್ಕೆ ಎ.ಜೆ. ಶೆಟ್ಟಿ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ, ಚೇತನ್‌ ಡಿಸೋಜಾ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

ಅಂದಹಾಗೆ, ಹೊಂಬಾಳೆ ಫಿಲಂಸ್ ಸಂಸ್ಥೆಯು ಘೋಷಿಸಿ, ಪ್ರಾರಂಭಿಸಿದ ಹಲವು ಕನ್ನಡ ಚಿತ್ರಗಳಲ್ಲಿ ‘ಬಘೀರ’ ಕೊನೆಯ ಚಿತ್ರವಾಗಿದ್ದು, ಈ ಸಂಸ್ಥೆಯ ಮುಂದಿನ ಹೆಜ್ಜೆ ಏನು? ಮುಂದಿನ ದಿನಗಳಲ್ಲಿ ಯಾವೆಲ್ಲಾ ಚಿತ್ರಗಳನ್ನು ನಿರ್ಮಿಸುತ್ತದೆ? ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.

ಭೂಮಿಕಾ

Recent Posts

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

16 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

20 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

41 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

56 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

2 hours ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago