ಮನರಂಜನೆ

ದೀಪಾವಳಿಗೆ ಬರ್ತಾನೆ ‘ಬಘೀರ’; ಅ. 17ಕ್ಕೆ ಮೊದಲ ಹಾಡು

ಡಿಸೆಂಬರ್‍ ಮೂರಕ್ಕೆ ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳಾಗುತ್ತವೆ. 2021ರಲ್ಲಿ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರವು ಬಿಡುಗಡೆಯಾಗಿತ್ತು. ಅದಕ್ಕೂ ಮೊದಲೇ ‘ಬಘೀರ’ ಚಿತ್ರದ ಘೋಷಣೆಯಾಗಿದ್ದರೂ, ಕಾರಣಾಂತರಗಳಿಂದ ತಡವಾಗಿ, ಇದೀಗ ಕೊನೆಗೂ ಅಕ್ಟೋಬರ್‍ 31ರಂದು ದೀಪಾವಳಿ ಪ್ರಯುಕ್ತ ಬಿಡುಗಡೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೊಂಬಾಳೆ ಫಿಲಂಸ್‍ ಸಂಸ್ಥೆಯಡಿ ವಿಜಯ್‍ ಕಿರಗಂದೂರು ನಿರ್ಮಿಸಿರುವ ‘ಬಘೀರ’ ಚಿತ್ರಕ್ಕೆ ‘ಕೆಜಿಎಫ್‌’ ಮತ್ತು ‘ಸಲಾರ್‌’ ಚಿತ್ರಗಳ ನಿರ್ದೇಶಕ ಪ್ರಶಾಂತ್‌ ನೀಲ್‌ ಕಥೆ ಬರೆದಿದ್ದಾರೆ ಎಂಬುದು ಇನ್ನೊಂದು ಬಲ. ಆಕ್ಷನ್‌ ಟೀಸರ್‌ ಮೂಲಕವೇ ನಿರೀಕ್ಷೆ ಮೂಡಿಸಿರುವ ಈ ಸಿನಿಮಾದ ಮೊದಲ ಹಾಡು ‘ರುಧೀರ ಧಾರಾ ಸಾಂಗ್‌’ ಅಕ್ಟೋಬರ್‌ 17ರ ಬೆಳಗ್ಗೆ 10:35ಕ್ಕೆ ಬಿಡುಗಡೆ ಆಗಲಿದೆ. ಈ ಹಾಡು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರದ ಕೆಲಸಗಳನ್ನು ಪ್ರಾರಂಭಿಸಲಿವೆ.

ಡಾಕ್ಟರ್‌ ಸೂರಿ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವ ‘ಬಘೀರ’ ಚಿತ್ರದಲ್ಲಿ ಪೊಲೀಸ್‌ ಅವತಾರದಲ್ಲಿ ಶ್ರೀಮುರಳಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್‌ ನಟಿಸಿದರೆ, ಇನ್ನುಳಿದಂತೆ ಪ್ರಕಾಶ್‌ ರೈ, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಗರುಡ ರಾಮ್, ಅಶ್ವಿನ್ ಹಾಸನ್‍, ರಘೂ ರಾಮನಕೊಪ್ಪ ಸೇರಿ ಇನ್ನೂ ಹತ್ತಾರು ಕಲಾವಿದರು ನಟಿಸಿದ್ದಾರೆ.

‘ಬಘೀರ’ ಚಿತ್ರಕ್ಕೆ ಎ.ಜೆ. ಶೆಟ್ಟಿ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ, ಚೇತನ್‌ ಡಿಸೋಜಾ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

ಅಂದಹಾಗೆ, ಹೊಂಬಾಳೆ ಫಿಲಂಸ್ ಸಂಸ್ಥೆಯು ಘೋಷಿಸಿ, ಪ್ರಾರಂಭಿಸಿದ ಹಲವು ಕನ್ನಡ ಚಿತ್ರಗಳಲ್ಲಿ ‘ಬಘೀರ’ ಕೊನೆಯ ಚಿತ್ರವಾಗಿದ್ದು, ಈ ಸಂಸ್ಥೆಯ ಮುಂದಿನ ಹೆಜ್ಜೆ ಏನು? ಮುಂದಿನ ದಿನಗಳಲ್ಲಿ ಯಾವೆಲ್ಲಾ ಚಿತ್ರಗಳನ್ನು ನಿರ್ಮಿಸುತ್ತದೆ? ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.

ಭೂಮಿಕಾ

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

7 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

17 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

36 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

59 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago