ಮನರಂಜನೆ

ದೀಪಾವಳಿಗೆ ಬರ್ತಾನೆ ‘ಬಘೀರ’; ಅ. 17ಕ್ಕೆ ಮೊದಲ ಹಾಡು

ಡಿಸೆಂಬರ್‍ ಮೂರಕ್ಕೆ ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳಾಗುತ್ತವೆ. 2021ರಲ್ಲಿ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರವು ಬಿಡುಗಡೆಯಾಗಿತ್ತು. ಅದಕ್ಕೂ ಮೊದಲೇ ‘ಬಘೀರ’ ಚಿತ್ರದ ಘೋಷಣೆಯಾಗಿದ್ದರೂ, ಕಾರಣಾಂತರಗಳಿಂದ ತಡವಾಗಿ, ಇದೀಗ ಕೊನೆಗೂ ಅಕ್ಟೋಬರ್‍ 31ರಂದು ದೀಪಾವಳಿ ಪ್ರಯುಕ್ತ ಬಿಡುಗಡೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಹೊಂಬಾಳೆ ಫಿಲಂಸ್‍ ಸಂಸ್ಥೆಯಡಿ ವಿಜಯ್‍ ಕಿರಗಂದೂರು ನಿರ್ಮಿಸಿರುವ ‘ಬಘೀರ’ ಚಿತ್ರಕ್ಕೆ ‘ಕೆಜಿಎಫ್‌’ ಮತ್ತು ‘ಸಲಾರ್‌’ ಚಿತ್ರಗಳ ನಿರ್ದೇಶಕ ಪ್ರಶಾಂತ್‌ ನೀಲ್‌ ಕಥೆ ಬರೆದಿದ್ದಾರೆ ಎಂಬುದು ಇನ್ನೊಂದು ಬಲ. ಆಕ್ಷನ್‌ ಟೀಸರ್‌ ಮೂಲಕವೇ ನಿರೀಕ್ಷೆ ಮೂಡಿಸಿರುವ ಈ ಸಿನಿಮಾದ ಮೊದಲ ಹಾಡು ‘ರುಧೀರ ಧಾರಾ ಸಾಂಗ್‌’ ಅಕ್ಟೋಬರ್‌ 17ರ ಬೆಳಗ್ಗೆ 10:35ಕ್ಕೆ ಬಿಡುಗಡೆ ಆಗಲಿದೆ. ಈ ಹಾಡು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರದ ಕೆಲಸಗಳನ್ನು ಪ್ರಾರಂಭಿಸಲಿವೆ.

ಡಾಕ್ಟರ್‌ ಸೂರಿ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವ ‘ಬಘೀರ’ ಚಿತ್ರದಲ್ಲಿ ಪೊಲೀಸ್‌ ಅವತಾರದಲ್ಲಿ ಶ್ರೀಮುರಳಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್‌ ನಟಿಸಿದರೆ, ಇನ್ನುಳಿದಂತೆ ಪ್ರಕಾಶ್‌ ರೈ, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಗರುಡ ರಾಮ್, ಅಶ್ವಿನ್ ಹಾಸನ್‍, ರಘೂ ರಾಮನಕೊಪ್ಪ ಸೇರಿ ಇನ್ನೂ ಹತ್ತಾರು ಕಲಾವಿದರು ನಟಿಸಿದ್ದಾರೆ.

‘ಬಘೀರ’ ಚಿತ್ರಕ್ಕೆ ಎ.ಜೆ. ಶೆಟ್ಟಿ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ, ಚೇತನ್‌ ಡಿಸೋಜಾ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

ಅಂದಹಾಗೆ, ಹೊಂಬಾಳೆ ಫಿಲಂಸ್ ಸಂಸ್ಥೆಯು ಘೋಷಿಸಿ, ಪ್ರಾರಂಭಿಸಿದ ಹಲವು ಕನ್ನಡ ಚಿತ್ರಗಳಲ್ಲಿ ‘ಬಘೀರ’ ಕೊನೆಯ ಚಿತ್ರವಾಗಿದ್ದು, ಈ ಸಂಸ್ಥೆಯ ಮುಂದಿನ ಹೆಜ್ಜೆ ಏನು? ಮುಂದಿನ ದಿನಗಳಲ್ಲಿ ಯಾವೆಲ್ಲಾ ಚಿತ್ರಗಳನ್ನು ನಿರ್ಮಿಸುತ್ತದೆ? ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.

ಭೂಮಿಕಾ

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

9 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

10 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

11 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

11 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

16 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

16 hours ago