ಮನರಂಜನೆ

ಟಾಲಿವುಡ್‍ಗೆ ಎಂಟ್ರಿ ಕೊಟ್ಟ ಬಾಲಯ್ಯ ಪುತ್ರ ನಂದಮೂರಿ ಮೋಕ್ಷಜ್ಞ

ತೆಲುಗು ಚಿತ್ರರಂಗದಲ್ಲಿ ಹಲವು ಜನಪ್ರಿಯ ನಟ ಮತ್ತು ತಂತ್ರಜ್ಞರ ಮಕ್ಕಳು ತೊಡಗಿಸಿಕೊಂಡಿದ್ದಾರೆ. ಚಿರಂಜೀವಿ, ನಾಗಾರ್ಜುನ, ಶ್ರೀಕಾಂತ್‍, ಅಲ್ಲು ಅರವಿಂದ್‍ ಹೀಗೆ ಸಾಕಷ್ಟು ಜನಪ್ರಿಯ ಮಕ್ಕಳು ಹೀರೋಗಳಾಗಿದ್ದಾರೆ. ನಂದಮೂರಿ ಕುಟುಂಬದ ಮೂರನೇ ತಲೆಮಾರಿನವರು ಸಹ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ ಮಗ ಸಹ ಹೀರೋ ಆಗುವುದಕ್ಕೆ ಹೊರಟಿದ್ದಾರೆ.

ಇತ್ತೀಚೆಗೆ ನಂದಮೂರಿ ಬಾಲಕೃಷ್ಣ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗಿದ್ದನ್ನು ನೆನೆಯಲು ಹೈದರಾಬಾದ್‍ನಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡದ ಶಿವರಾಜಕುಮಾರ್‍, ಉಪೇಂದ್ರ ಮತ್ತು ‘ದುನಿಯಾ’ ವಿಜಯ್‍ ಭಾಗವಹಿಸಿ, ಬಾಲಕೃಷ್ಣ ಅವರಿಗೆ ಶುಭ ಕೋರಿದ್ದರು.

ಈಗ ಅವರ ಮಗ ಹೀರೋ ಆಗುತ್ತಿರುವ ಸುದ್ದಿ ಬಂದಿದೆ. ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್‌.ಎಲ್‌.ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್‌ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ.

ಇತ್ತೀಚೆಗೆ ಮೋಕ್ಷಜ್ಞ ಅಭಿನಯದ ಪುರಾಣ ಹಿನ್ನೆಲೆಯ ಕಥೆ ಆಧರಿಸಿದ ಸಿನಿಮಾ ಘೋಷಣೆಯಾಗಿದೆ. ಚಿತ್ರದ ಫಸ್ಟ್‌ ಲುಕ್‌ ಸಹ ಬಿಡುಗಡೆ ಆಗಿದೆ. ಇತ್ತೀಚಿನ ‘ಹನುಮಾನ್‌’ ಸಿನಿಮಾ ಮೂಲಕ ಯಶಸ್ಸು ಪಡೆದ ನಿರ್ದೇಶಕ ಪ್ರಶಾಂತ್‌ ವರ್ಮಾ, ಮೋಕ್ಷಜ್ಞ ಅಭಿನಯದ ಮೊದಲ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದೊಂದು ಚಿನ್ನದ ಗಣಿಯ ಕುರಿತಾಗಿದ್ದು, ಇತಿಹಾಸದಿಂದ ಸ್ಫೂರ್ತಿ ಪಡೆದಿದೆಯಂತೆ. ಮೋಕ್ಷಜ್ಞ ನಟನೆ, ನೃತ್ಯ ಮತ್ತು ಮಾರ್ಷಲ್‍ ಆರ್ಟ್ಸ್ನಲ್ಲಿ ತರಬೇತಿ ಪಡೆದಿದ್ದು, ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

4 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

5 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

6 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago