ಮನರಂಜನೆ

ಟಾಲಿವುಡ್‍ಗೆ ಎಂಟ್ರಿ ಕೊಟ್ಟ ಬಾಲಯ್ಯ ಪುತ್ರ ನಂದಮೂರಿ ಮೋಕ್ಷಜ್ಞ

ತೆಲುಗು ಚಿತ್ರರಂಗದಲ್ಲಿ ಹಲವು ಜನಪ್ರಿಯ ನಟ ಮತ್ತು ತಂತ್ರಜ್ಞರ ಮಕ್ಕಳು ತೊಡಗಿಸಿಕೊಂಡಿದ್ದಾರೆ. ಚಿರಂಜೀವಿ, ನಾಗಾರ್ಜುನ, ಶ್ರೀಕಾಂತ್‍, ಅಲ್ಲು ಅರವಿಂದ್‍ ಹೀಗೆ ಸಾಕಷ್ಟು ಜನಪ್ರಿಯ ಮಕ್ಕಳು ಹೀರೋಗಳಾಗಿದ್ದಾರೆ. ನಂದಮೂರಿ ಕುಟುಂಬದ ಮೂರನೇ ತಲೆಮಾರಿನವರು ಸಹ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ ಮಗ ಸಹ ಹೀರೋ ಆಗುವುದಕ್ಕೆ ಹೊರಟಿದ್ದಾರೆ.

ಇತ್ತೀಚೆಗೆ ನಂದಮೂರಿ ಬಾಲಕೃಷ್ಣ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗಿದ್ದನ್ನು ನೆನೆಯಲು ಹೈದರಾಬಾದ್‍ನಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡದ ಶಿವರಾಜಕುಮಾರ್‍, ಉಪೇಂದ್ರ ಮತ್ತು ‘ದುನಿಯಾ’ ವಿಜಯ್‍ ಭಾಗವಹಿಸಿ, ಬಾಲಕೃಷ್ಣ ಅವರಿಗೆ ಶುಭ ಕೋರಿದ್ದರು.

ಈಗ ಅವರ ಮಗ ಹೀರೋ ಆಗುತ್ತಿರುವ ಸುದ್ದಿ ಬಂದಿದೆ. ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್‌.ಎಲ್‌.ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್‌ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ.

ಇತ್ತೀಚೆಗೆ ಮೋಕ್ಷಜ್ಞ ಅಭಿನಯದ ಪುರಾಣ ಹಿನ್ನೆಲೆಯ ಕಥೆ ಆಧರಿಸಿದ ಸಿನಿಮಾ ಘೋಷಣೆಯಾಗಿದೆ. ಚಿತ್ರದ ಫಸ್ಟ್‌ ಲುಕ್‌ ಸಹ ಬಿಡುಗಡೆ ಆಗಿದೆ. ಇತ್ತೀಚಿನ ‘ಹನುಮಾನ್‌’ ಸಿನಿಮಾ ಮೂಲಕ ಯಶಸ್ಸು ಪಡೆದ ನಿರ್ದೇಶಕ ಪ್ರಶಾಂತ್‌ ವರ್ಮಾ, ಮೋಕ್ಷಜ್ಞ ಅಭಿನಯದ ಮೊದಲ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದೊಂದು ಚಿನ್ನದ ಗಣಿಯ ಕುರಿತಾಗಿದ್ದು, ಇತಿಹಾಸದಿಂದ ಸ್ಫೂರ್ತಿ ಪಡೆದಿದೆಯಂತೆ. ಮೋಕ್ಷಜ್ಞ ನಟನೆ, ನೃತ್ಯ ಮತ್ತು ಮಾರ್ಷಲ್‍ ಆರ್ಟ್ಸ್ನಲ್ಲಿ ತರಬೇತಿ ಪಡೆದಿದ್ದು, ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

9 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

9 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

10 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

11 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

12 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

12 hours ago