ಮನರಂಜನೆ

ಟಾಲಿವುಡ್‍ಗೆ ಎಂಟ್ರಿ ಕೊಟ್ಟ ಬಾಲಯ್ಯ ಪುತ್ರ ನಂದಮೂರಿ ಮೋಕ್ಷಜ್ಞ

ತೆಲುಗು ಚಿತ್ರರಂಗದಲ್ಲಿ ಹಲವು ಜನಪ್ರಿಯ ನಟ ಮತ್ತು ತಂತ್ರಜ್ಞರ ಮಕ್ಕಳು ತೊಡಗಿಸಿಕೊಂಡಿದ್ದಾರೆ. ಚಿರಂಜೀವಿ, ನಾಗಾರ್ಜುನ, ಶ್ರೀಕಾಂತ್‍, ಅಲ್ಲು ಅರವಿಂದ್‍ ಹೀಗೆ ಸಾಕಷ್ಟು ಜನಪ್ರಿಯ ಮಕ್ಕಳು ಹೀರೋಗಳಾಗಿದ್ದಾರೆ. ನಂದಮೂರಿ ಕುಟುಂಬದ ಮೂರನೇ ತಲೆಮಾರಿನವರು ಸಹ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ ಮಗ ಸಹ ಹೀರೋ ಆಗುವುದಕ್ಕೆ ಹೊರಟಿದ್ದಾರೆ.

ಇತ್ತೀಚೆಗೆ ನಂದಮೂರಿ ಬಾಲಕೃಷ್ಣ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗಿದ್ದನ್ನು ನೆನೆಯಲು ಹೈದರಾಬಾದ್‍ನಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡದ ಶಿವರಾಜಕುಮಾರ್‍, ಉಪೇಂದ್ರ ಮತ್ತು ‘ದುನಿಯಾ’ ವಿಜಯ್‍ ಭಾಗವಹಿಸಿ, ಬಾಲಕೃಷ್ಣ ಅವರಿಗೆ ಶುಭ ಕೋರಿದ್ದರು.

ಈಗ ಅವರ ಮಗ ಹೀರೋ ಆಗುತ್ತಿರುವ ಸುದ್ದಿ ಬಂದಿದೆ. ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್‌.ಎಲ್‌.ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್‌ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ.

ಇತ್ತೀಚೆಗೆ ಮೋಕ್ಷಜ್ಞ ಅಭಿನಯದ ಪುರಾಣ ಹಿನ್ನೆಲೆಯ ಕಥೆ ಆಧರಿಸಿದ ಸಿನಿಮಾ ಘೋಷಣೆಯಾಗಿದೆ. ಚಿತ್ರದ ಫಸ್ಟ್‌ ಲುಕ್‌ ಸಹ ಬಿಡುಗಡೆ ಆಗಿದೆ. ಇತ್ತೀಚಿನ ‘ಹನುಮಾನ್‌’ ಸಿನಿಮಾ ಮೂಲಕ ಯಶಸ್ಸು ಪಡೆದ ನಿರ್ದೇಶಕ ಪ್ರಶಾಂತ್‌ ವರ್ಮಾ, ಮೋಕ್ಷಜ್ಞ ಅಭಿನಯದ ಮೊದಲ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದೊಂದು ಚಿನ್ನದ ಗಣಿಯ ಕುರಿತಾಗಿದ್ದು, ಇತಿಹಾಸದಿಂದ ಸ್ಫೂರ್ತಿ ಪಡೆದಿದೆಯಂತೆ. ಮೋಕ್ಷಜ್ಞ ನಟನೆ, ನೃತ್ಯ ಮತ್ತು ಮಾರ್ಷಲ್‍ ಆರ್ಟ್ಸ್ನಲ್ಲಿ ತರಬೇತಿ ಪಡೆದಿದ್ದು, ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

1 hour ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

1 hour ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

1 hour ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago