ಮನರಂಜನೆ

ಟಾಲಿವುಡ್‍ಗೆ ಎಂಟ್ರಿ ಕೊಟ್ಟ ಬಾಲಯ್ಯ ಪುತ್ರ ನಂದಮೂರಿ ಮೋಕ್ಷಜ್ಞ

ತೆಲುಗು ಚಿತ್ರರಂಗದಲ್ಲಿ ಹಲವು ಜನಪ್ರಿಯ ನಟ ಮತ್ತು ತಂತ್ರಜ್ಞರ ಮಕ್ಕಳು ತೊಡಗಿಸಿಕೊಂಡಿದ್ದಾರೆ. ಚಿರಂಜೀವಿ, ನಾಗಾರ್ಜುನ, ಶ್ರೀಕಾಂತ್‍, ಅಲ್ಲು ಅರವಿಂದ್‍ ಹೀಗೆ ಸಾಕಷ್ಟು ಜನಪ್ರಿಯ ಮಕ್ಕಳು ಹೀರೋಗಳಾಗಿದ್ದಾರೆ. ನಂದಮೂರಿ ಕುಟುಂಬದ ಮೂರನೇ ತಲೆಮಾರಿನವರು ಸಹ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ ಮಗ ಸಹ ಹೀರೋ ಆಗುವುದಕ್ಕೆ ಹೊರಟಿದ್ದಾರೆ.

ಇತ್ತೀಚೆಗೆ ನಂದಮೂರಿ ಬಾಲಕೃಷ್ಣ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗಿದ್ದನ್ನು ನೆನೆಯಲು ಹೈದರಾಬಾದ್‍ನಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕನ್ನಡದ ಶಿವರಾಜಕುಮಾರ್‍, ಉಪೇಂದ್ರ ಮತ್ತು ‘ದುನಿಯಾ’ ವಿಜಯ್‍ ಭಾಗವಹಿಸಿ, ಬಾಲಕೃಷ್ಣ ಅವರಿಗೆ ಶುಭ ಕೋರಿದ್ದರು.

ಈಗ ಅವರ ಮಗ ಹೀರೋ ಆಗುತ್ತಿರುವ ಸುದ್ದಿ ಬಂದಿದೆ. ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್‌.ಎಲ್‌.ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್‌ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ.

ಇತ್ತೀಚೆಗೆ ಮೋಕ್ಷಜ್ಞ ಅಭಿನಯದ ಪುರಾಣ ಹಿನ್ನೆಲೆಯ ಕಥೆ ಆಧರಿಸಿದ ಸಿನಿಮಾ ಘೋಷಣೆಯಾಗಿದೆ. ಚಿತ್ರದ ಫಸ್ಟ್‌ ಲುಕ್‌ ಸಹ ಬಿಡುಗಡೆ ಆಗಿದೆ. ಇತ್ತೀಚಿನ ‘ಹನುಮಾನ್‌’ ಸಿನಿಮಾ ಮೂಲಕ ಯಶಸ್ಸು ಪಡೆದ ನಿರ್ದೇಶಕ ಪ್ರಶಾಂತ್‌ ವರ್ಮಾ, ಮೋಕ್ಷಜ್ಞ ಅಭಿನಯದ ಮೊದಲ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದೊಂದು ಚಿನ್ನದ ಗಣಿಯ ಕುರಿತಾಗಿದ್ದು, ಇತಿಹಾಸದಿಂದ ಸ್ಫೂರ್ತಿ ಪಡೆದಿದೆಯಂತೆ. ಮೋಕ್ಷಜ್ಞ ನಟನೆ, ನೃತ್ಯ ಮತ್ತು ಮಾರ್ಷಲ್‍ ಆರ್ಟ್ಸ್ನಲ್ಲಿ ತರಬೇತಿ ಪಡೆದಿದ್ದು, ಕ್ಯಾಮೆರಾ ಎದುರಿಸಲು ಸಜ್ಜಾಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

36 mins ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

57 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

3 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

3 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

4 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

5 hours ago