ಮನರಂಜನೆ

‘ಬಲರಾಮನ ದಿನಗಳು’ ಅಂತ್ಯ; ವಿನೋದ್ ಪ್ರಭಾಕರ್ ಹೊಸ ಚಿತ್ರದ ಚಿತ್ರೀಕರಣ ಪೂರ್ಣ

ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಇತ್ತೀಚೆಗೆ 25 ದಿನಗಳ ಪ್ರದರ್ಶನ ಕಂಡಿದೆ. ಈ ಮಧ್ಯೆ, ವಿನೋದ್‍ ಅಭಿನಯದ ‘ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಮುಗಿದಿದೆ.

ಇದು ವಿನೋದ್‍ ಪ್ರಭಾಕರ್ ಅಭಿನಯದ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. ಇದೊಂದು 70-80ರ ಕಾಲಘಟ್ಟದ ಚಿತ್ರವಾಗಿದ್ದು, ಆಗಿನ ಕಾಲದ ಭೂಗತಲೋಕದ ಕಥೆಯಾಗಿದೆ. ವಿಶೇಷವೆಂದರೆ, ಕೆ.ಎಂ. ಚೈತನ್ಯ ಅವರ ಮೊದಲ ನಿರ್ದೇಶನದ ‘ಆ ದಿನಗಳು’ ಚಿತ್ರದಲ್ಲಿ ಅತುಲ್‍ ಕುಲಕರ್ಣಿ ಮತ್ತು ಆಶೀಶ್‍ ವಿದ್ಯಾರ್ಥಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈಗ ಸುಮಾರು 15 ವರ್ಷಗಳ ನಂತರ ಇಬ್ಬರೂ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ‘ಆ ದಿನಗಳು’ ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶಿಸುತ್ತಿದ್ದಾರೆ. ವಿನೋದ್‍ಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ‌‌. ಹೆಸರಾಂತ ಕಲಾವಿದರಾದ ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ, ವಿನಯ್ ಗೌಡ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸಂತೋಷ್ ನಾರಾಯಣ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದು, ವೇಣು ಛಾಯಾಗ್ರಹಣವಿದೆ.

ಈ ಚಿತ್ರಕ್ಕೆ ಬೆಂಗಳೂರು, ಮೈಸೂರು, ಶಿವಮೊಗ್ಗ, ಸಕಲೇಶಪುರ ಮುಂತಾದ ಕಡೆ 80 ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago