ಮನರಂಜನೆ

10 ಮಿಲಿಯನ್‍ ವೀಕ್ಷಣೆ ಕಂಡು ದಾಖಲೆ ಬರೆದ ‘ಬ್ಯಾಂಗಲ್ ಬಂಗಾರಿ …’

‘ಎಕ್ಕ’ ಚಿತ್ರದ ‘ಬ್ಯಾಂಗಲ್ ಬಂಗಾರಿ …’ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಜನಮನ್ನಣೆ ಪಡೆದಿತ್ತು. ಈ ಹಾಡಿಗೆ ದಾಖಲೆ ಸಂಖ್ಯೆಯಲ್ಲಿ ರೀಲ್ಸ್ ಮಾಡಿದೆ. ಈ ಹಾಡು ಕೇವಲ 22 ದಿನಗಳಲ್ಲಿ 10 ಮಿಲಿಯನ್ ವೀಕ್ಷಣೆ ಕಂಡಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆದ ಹಾಡುಗಳ ಪೈಕಿ 29ನೇ ಸ್ಥಾನ ಪಡೆದಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ.

ಯುವ ರಾಜಕುಮಾರ್ ಹಾಗೂ ನಾಯಕಿ ಸಂಜನಾ ಆನಂದ್ ‘ಬ್ಯಾಂಗಲ್ ಬಂಗಾರಿ …’ ಅಂತ ಕುಣಿದು ಕುಪ್ಪಳಿಸಿದ್ದಾರೆ. ನಾಗಾರ್ಜುನ ಶರ್ಮಾ ಸಾಹಿತ್ಯ ಬರೆದ ಹಾಡಿಗೆ ಆಂತೋನಿ ದಾಸ್ ಧ್ವನಿಯಾಗಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಮುರಳಿ ಮಾಸ್ಟರ್‍ ನೃತ್ಯ ಸಂಯೋಜಿಸಿದ್ದಾರೆ.

‘ಎಕ್ಕ’ ಚಿತ್ರವನ್ನು ರೋಹಿತ್ ಪದಕಿ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಈ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಜೊತೆಯಾಗಿ ಸೇರಿ ನಿರ್ಮಿಸುತ್ತಿದ್ದಾರೆ. ಕನ್ನಡದ ಮೂರು ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆಗಳು ಜೊತೆಯಾಗಿ ಚಿತ್ರ ನಿರ್ಮಿಸುತ್ತಿರುವುದು ವಿಶೇಷ.

‘ಎಕ್ಕ’ ಚಿತ್ರದಲ್ಲಿ ಯುವ ರಾಜಕುಮಾರ್ ಜೊತೆಗೆ ಸಂಪದ ಹುಲಿವಾನ, ಸಂಜನಾ ಆನಂದ್, ಶ್ರುತಿ, ಅತುಲ್ ಕುಲಕರ್ಣಿ, ಆದಿತ್ಯ, ಸಾಧು ಕೋಕಿಲ, ಪುನೀತ್ ರುದ್ರನಾಗ್, ಡಾ. ಸೂರಿ, ಹರಿಣಿ ಮುಂತಾದವರು ನಟಿಸಿದ್ದಾರೆ. ಚರಣ್‍ ರಾಜ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಎಕ್ಕ’ ಜುಲೈ 18ರಂದು ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

7 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

8 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

9 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

9 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

9 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

10 hours ago