ಮನರಂಜನೆ

600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬ್ಯಾಂಕ್‍ ಜನಾರ್ಧನ್‍ ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ಬ್ಯಾಂಕ್‍ ಜನಾರ್ಧನ್‍ ಎಂದೇ ಜನಪ್ರಿಯವಾಗಿದ್ದ ಹಿರಿಯ ನಟ ಜನಾರ್ಧನ್‍, ರಾತ್ರಿ 2.3ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಮೂಲತಃ ಚಿತ್ರದುರ್ಗದ ಹೊಳಲ್ಕೆಯವರಾದ ಜನಾರ್ಧನ್‍ ಓದಿದ್ದು 10ನೇ ಕ್ಲಾಸಿನವರೆಗೆ ಮಾತ್ರ. ಕಡು ಬಡ ಕುಟುಂಬದವರಾದ ಜನಾರ್ಧನ್‍, ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬೆಳೆದವರು. ನಾಟಕಗಳಲ್ಲಿ ಪಾತ್ರ ಮಾಡುತ್ತಿದ್ದ ಜನಾರ್ಧನ್‍, ಜಯಲಕ್ಷ್ಮೀ ಬ್ಯಾಂಕ್‍ನಲ್ಲಿ ಜವಾನನಾಗಿ ಕೆಲಸಕ್ಕೆ ಸೇರಿದರು. ಜೊತೆಗೆ ಮಲ್ಲಿಕಾರ್ಜುನ ಟೂರಿಂಗ್‍ ಟಾಕೀಸ್‍ ಎಂಬ ಟಾಕೀಸ್‍ನಲ್ಲೂ ಕೆಲಸ ಮಾಡುತ್ತಿದ್ದರು. ಹೀಗಿರುವಾಗಲೇ, ಅವರ ಅಭಿನಯದ ‘ಗೌಡ್ರ ಗದ್ಲ’ ನಾಟಕ ಯಶಸ್ವಿಯಾಯಿತು. ಈ ನಾಟಕವನ್ನು ವೀಕ್ಷಿಸಿದ ಹಿರಿಯ ನಟ ಧೀರೇಂದ್ರ ಗೋಪಾಲ್‍, ಜನಾರ್ಧನ್‍ ಅವರನ್ನು ಸಿನಿಮಾದಲ್ಲಿ ನಟಿಸುವುದಕ್ಕೆ ಪ್ರೋತ್ಸಾಹಿಸಿದರು.

ಒಮ್ಮೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ, ಜನಾರ್ಧನ್‍ ಅವರನ್ನು ‘ಸಾಹಸ ಸಿಂಹ’ ಚಿತ್ರದ ಚಿತ್ರೀಕರಣಕ್ಕೆ ಕರೆದುಕೊಂಡು ಹೋದರಂತೆ ಧೀರೇಂದ್ರ ಗೋಪಾಲ್‍. ಅಲ್ಲಿ ಕುಣಿಗಲ್‍ ನಾಗಭೂಷಣ್‍ ಅವರ ಪರಿಚಯವಾಗಿ, ‘ಊರಿಗೆ ಉಪಕಾರಿ’ ಚಿತ್ರದಲ್ಲೊಂದು ಪಾತ್ರ ಸಿಕ್ಕಿತಂತೆ. ವಜ್ರಮುನಿ ಅವರ ಬಾಡಿಗಾರ್ಡ್ ಪಾತ್ರದಲ್ಲಿ ಗಮನಸೆಳೆದ ಜನಾರ್ಧನ್‍, ನಂತರ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿದರಂತೆ. ಲಾಯರ್‍, ಡಾಕ್ಟರ್‍, ಇನ್‍ಸ್ಪೆಕ್ಟರ್ ಹೀಗೆ ಒಂದೊಂದೇ ದೃಶ್ಯವಿರುವ ಪಾತ್ರಗಳಲ್ಲಿ ಅವರು ನಟಿಸಿದ್ದಾರೆ.

ಜನಾರ್ಧನ್‍ ಅವರಿಗೆ ದೊಡ್ಡ ಬ್ರೇಕ್‍ ನೀಡಿದ ಚಿತ್ರವೆಂದರೆ ಅದು ಕಾಶೀನಾಥ್‍ ಅಭಿನಯದ ‘ಅಜಗಜಾಂತರ’. ಈ ಚಿತ್ರದಲ್ಲಿ ಬ್ರೋಕರ್‍ ಭೀಮಯ್ಯ ಎಂಬ ಕಾಮಿಡಿ ವಿಲನ್‍ ಪಾತ್ರ ಮಾಡಿ ಜನಪ್ರಿಯವಾದ ಅವರು, ನಂತರ ಉಪೇಂದ್ರ ನಿರ್ದೇಶನದ ‘ತರ್ಲೆ ನನ್ಮಗ’ ಚಿತ್ರದಲ್ಲಿ ಪರಂಧಾಮಯ್ಯ ಊರುಬಾಗಿಲ್‍ ಪಾತ್ರದಲ್ಲಿ ದೊಡ್ಡ ಹೆಸರು ಮಾಡಿದರು. ಅಲ್ಲಿಂದ ಅವರ ಮತ್ತು ಜಗ್ಗೇಶ್‍ ಅವರ ಜೋಡಿ ಜನಪ್ರಿಯವಾಗಿ ಸಾಕಷ್ಟು ಚಿತ್ರಗಳಲ್ಲಿ ನಟಿಸುವಂತಾಯಿತು.
ಮುಂದಿನ ದಿನಗಳಲ್ಲಿ ‘ಶ್‍’, ‘ಮೇಕಪ್‍’, ‘ಮಿಸ್ಟರ್ ಬಕ್ರ’, ‘ಓಳು ಸಾರ್ ಬರೀ ಓಳು’, ‘ರೂಪಾಯಿ ರಾಜ’, ‘ಬೊಂಬಾಟ್‍ ಹೆಂಡ್ತಿ’ ಸೇರಿದಂತೆ ಇದುವರೆಗೂ 600 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. 2023ರಲ್ಲಿ ಬಿಡುಗಡೆಯಾದ ‘ಉಂಡೆನಾಮ’ ಚಿತ್ರವು ಅವರ ಕೊನೆಯ ಚಿತ್ರವಾಯ್ತು. ಕೆಲವು ವರ್ಷಗಳ ಹಿಂದೆಯೇ ಹೃದಯದ ಚಿಕಿತ್ಸೆಗೆ ಒಳಗಾಗಿದ್ದ ಅವರು, ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ರಾತ್ರಿ 2.30ರ ಹೊತ್ತಿಗೆ ಅವರು ನಿಧನರಾಗಿದ್ದಾರೆ.

ಜನಾರ್ಧನ್‍ ಅವರ ಮಗ ಗುರುಪ್ರಸಾದ್‍, ‘ಅಗ್ನಿಮುಷ್ಠಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

3 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

12 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

17 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

21 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

26 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

28 mins ago