ಮನರಂಜನೆ

600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಬ್ಯಾಂಕ್‍ ಜನಾರ್ಧನ್‍ ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ಬ್ಯಾಂಕ್‍ ಜನಾರ್ಧನ್‍ ಎಂದೇ ಜನಪ್ರಿಯವಾಗಿದ್ದ ಹಿರಿಯ ನಟ ಜನಾರ್ಧನ್‍, ರಾತ್ರಿ 2.3ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಮೂಲತಃ ಚಿತ್ರದುರ್ಗದ ಹೊಳಲ್ಕೆಯವರಾದ ಜನಾರ್ಧನ್‍ ಓದಿದ್ದು 10ನೇ ಕ್ಲಾಸಿನವರೆಗೆ ಮಾತ್ರ. ಕಡು ಬಡ ಕುಟುಂಬದವರಾದ ಜನಾರ್ಧನ್‍, ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬೆಳೆದವರು. ನಾಟಕಗಳಲ್ಲಿ ಪಾತ್ರ ಮಾಡುತ್ತಿದ್ದ ಜನಾರ್ಧನ್‍, ಜಯಲಕ್ಷ್ಮೀ ಬ್ಯಾಂಕ್‍ನಲ್ಲಿ ಜವಾನನಾಗಿ ಕೆಲಸಕ್ಕೆ ಸೇರಿದರು. ಜೊತೆಗೆ ಮಲ್ಲಿಕಾರ್ಜುನ ಟೂರಿಂಗ್‍ ಟಾಕೀಸ್‍ ಎಂಬ ಟಾಕೀಸ್‍ನಲ್ಲೂ ಕೆಲಸ ಮಾಡುತ್ತಿದ್ದರು. ಹೀಗಿರುವಾಗಲೇ, ಅವರ ಅಭಿನಯದ ‘ಗೌಡ್ರ ಗದ್ಲ’ ನಾಟಕ ಯಶಸ್ವಿಯಾಯಿತು. ಈ ನಾಟಕವನ್ನು ವೀಕ್ಷಿಸಿದ ಹಿರಿಯ ನಟ ಧೀರೇಂದ್ರ ಗೋಪಾಲ್‍, ಜನಾರ್ಧನ್‍ ಅವರನ್ನು ಸಿನಿಮಾದಲ್ಲಿ ನಟಿಸುವುದಕ್ಕೆ ಪ್ರೋತ್ಸಾಹಿಸಿದರು.

ಒಮ್ಮೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ, ಜನಾರ್ಧನ್‍ ಅವರನ್ನು ‘ಸಾಹಸ ಸಿಂಹ’ ಚಿತ್ರದ ಚಿತ್ರೀಕರಣಕ್ಕೆ ಕರೆದುಕೊಂಡು ಹೋದರಂತೆ ಧೀರೇಂದ್ರ ಗೋಪಾಲ್‍. ಅಲ್ಲಿ ಕುಣಿಗಲ್‍ ನಾಗಭೂಷಣ್‍ ಅವರ ಪರಿಚಯವಾಗಿ, ‘ಊರಿಗೆ ಉಪಕಾರಿ’ ಚಿತ್ರದಲ್ಲೊಂದು ಪಾತ್ರ ಸಿಕ್ಕಿತಂತೆ. ವಜ್ರಮುನಿ ಅವರ ಬಾಡಿಗಾರ್ಡ್ ಪಾತ್ರದಲ್ಲಿ ಗಮನಸೆಳೆದ ಜನಾರ್ಧನ್‍, ನಂತರ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿದರಂತೆ. ಲಾಯರ್‍, ಡಾಕ್ಟರ್‍, ಇನ್‍ಸ್ಪೆಕ್ಟರ್ ಹೀಗೆ ಒಂದೊಂದೇ ದೃಶ್ಯವಿರುವ ಪಾತ್ರಗಳಲ್ಲಿ ಅವರು ನಟಿಸಿದ್ದಾರೆ.

ಜನಾರ್ಧನ್‍ ಅವರಿಗೆ ದೊಡ್ಡ ಬ್ರೇಕ್‍ ನೀಡಿದ ಚಿತ್ರವೆಂದರೆ ಅದು ಕಾಶೀನಾಥ್‍ ಅಭಿನಯದ ‘ಅಜಗಜಾಂತರ’. ಈ ಚಿತ್ರದಲ್ಲಿ ಬ್ರೋಕರ್‍ ಭೀಮಯ್ಯ ಎಂಬ ಕಾಮಿಡಿ ವಿಲನ್‍ ಪಾತ್ರ ಮಾಡಿ ಜನಪ್ರಿಯವಾದ ಅವರು, ನಂತರ ಉಪೇಂದ್ರ ನಿರ್ದೇಶನದ ‘ತರ್ಲೆ ನನ್ಮಗ’ ಚಿತ್ರದಲ್ಲಿ ಪರಂಧಾಮಯ್ಯ ಊರುಬಾಗಿಲ್‍ ಪಾತ್ರದಲ್ಲಿ ದೊಡ್ಡ ಹೆಸರು ಮಾಡಿದರು. ಅಲ್ಲಿಂದ ಅವರ ಮತ್ತು ಜಗ್ಗೇಶ್‍ ಅವರ ಜೋಡಿ ಜನಪ್ರಿಯವಾಗಿ ಸಾಕಷ್ಟು ಚಿತ್ರಗಳಲ್ಲಿ ನಟಿಸುವಂತಾಯಿತು.
ಮುಂದಿನ ದಿನಗಳಲ್ಲಿ ‘ಶ್‍’, ‘ಮೇಕಪ್‍’, ‘ಮಿಸ್ಟರ್ ಬಕ್ರ’, ‘ಓಳು ಸಾರ್ ಬರೀ ಓಳು’, ‘ರೂಪಾಯಿ ರಾಜ’, ‘ಬೊಂಬಾಟ್‍ ಹೆಂಡ್ತಿ’ ಸೇರಿದಂತೆ ಇದುವರೆಗೂ 600 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. 2023ರಲ್ಲಿ ಬಿಡುಗಡೆಯಾದ ‘ಉಂಡೆನಾಮ’ ಚಿತ್ರವು ಅವರ ಕೊನೆಯ ಚಿತ್ರವಾಯ್ತು. ಕೆಲವು ವರ್ಷಗಳ ಹಿಂದೆಯೇ ಹೃದಯದ ಚಿಕಿತ್ಸೆಗೆ ಒಳಗಾಗಿದ್ದ ಅವರು, ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ರಾತ್ರಿ 2.30ರ ಹೊತ್ತಿಗೆ ಅವರು ನಿಧನರಾಗಿದ್ದಾರೆ.

ಜನಾರ್ಧನ್‍ ಅವರ ಮಗ ಗುರುಪ್ರಸಾದ್‍, ‘ಅಗ್ನಿಮುಷ್ಠಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

8 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

9 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago