ಮನರಂಜನೆ

‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಒಂದು ವಾರ ಮುಂದಕ್ಕೆ: ದಾಖಲೆ ಬರೆಯಲಿಲ್ಲ ಬೃಂದಾ

ಈ ವಾರ ಬಿಡುಗಡೆಯಾದ ಆರು ಚಿತ್ರಗಳ ಜೊತೆಗೆ ದೀಕ್ಷಿತ್‍ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಚಿತ್ರ ಸಹ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರವು ಒಂದು ವಾರಕ್ಕೆ ಮುಂದಕ್ಕೆ ಹೋಗಿದ್ದು, ನವೆಂಬರ್ 27ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಹೌದು, ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಚಿತ್ರವು ನ.21ರಂದು ಬಿಡುಗಡೆಯಾಗಬೇಕಿತ್ತು. ನಟಿ ಬೃಂದಾ ಆಚಾರ್ಯ ತಮ್ಮ ಎರಡು ಚಿತ್ರಗಳು (‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಮತ್ತು ‘ಮಾರುತ’) ಒಂದೇ ದಿನ ಬಿಡುಗಡೆಯಾಗುತ್ತದೆ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಇದು ತಮ್ಮ ವೃತ್ತಿಜೀವನದಲ್ಲೇ ಒಂದು ದಾಖಲೆ ಆಗಲಿದೆ ಎಂದು ಖುಷಿಪಟ್ಟಿದ್ದರು. ಆದರೆ, ತಾಂತ್ರಿಕ ಕಾರಣಗಳಿಂದ ಚಿತ್ರ ಒಂದು ವಾರ ಮುಂದಕ್ಕೆ ಹೋಗಿದೆ. ನ.21ರ ಬದಲು ನ.27ರಂದು ಬಿಡುಗಡೆಯಾಗುತ್ತಿದೆ.

ಇದನ್ನು ಓದಿ: ನವೆಂಬರ್ 21ರಂದು ಎರಡು ಚಿತ್ರಗಳ ಜೊತೆಗೆ ಬರ್ತಿದ್ದಾರೆ ಬೃಂದಾ ಆಚಾರ್ಯ

ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಸಿದ್ಧವಾಗಿರುವ ಈ ಚಿತ್ರವನ್ನು ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಎಚ್.ಕೆ. ಪ್ರಕಾಶ್ ನಿರ್ಮಿಸಿದ್ದು, ಅಭಿಷೇಕ್‍ ಎಂ ನಿರ್ದೇಶನ ಮಾಡಿದ್ದಾರೆ. ಅಭಿಷೇಕ್‍ ಇದಕ್ಕೂ ಮೊದಲು ‘ಸಿಂಪಲ್’ ಸುನಿ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದವರು. ಜೊತೆಗೆ ರಕ್ಷಿತ್ ಶೆಟ್ಟಿ ಹಾಗೂ ಸಚಿನ್ ಶೆಟ್ಟಿ ಸೇರಿ ಪಿನಾಕ ಎಂಬ VFX ಸ್ಟುಡಿಯೋ ಸಹ ನಡೆಸುತ್ತಿದ್ದಾರೆ. ಈಗ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದಲ್ಲಿ ದೀಕ್ಷಿತ್‍ಗೆ ಮತ್ತು ಬೃಂದಾ ಆಚಾರ್ಯ ಜೊತೆಗೆ, ಉಷಾ ಭಂಡಾರಿ, ಗೋಪಾಲಕೃಷ್ಣ ದೇಶಪಾಂಡೆ, ಶ್ರೀವತ್ಸ, ಅಶ್ವಿನ್‍ ರಾವ್ ಪಲ್ಲಕ್ಕಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

7 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

8 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

8 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago