ಮನರಂಜನೆ

ಚರ್ಚೆ ಮಾಡಿ, ಸಮಸ್ಯೆಗಳಿಗೆ ಕಾರಣಗಳನ್ನು ಹುಡುಕಿ: ಬರಗೂರು ರಾಮಚಂದ್ರಪ್ಪ ಸಲಹೆ

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಚಿತ್ರರಂಗದವರೆಲ್ಲಾ ಒಟ್ಟಾಗಿ ಕುಳಿತು ಚರ್ಚೆ ಮಾಡಿ, ಸಮಸ್ಯೆಗಳಿಗೆ ಇರುವ ಕಾರಣಗಳನ್ನು ಹುಡುಗಿ ಎಂದು ಹಿರಿಯ ಸಾಹಿತಿ ಮತ್ತು ನಿರ್ದೇಶಕ ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದ್ದಾರೆ.

ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ.25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ, ರಂಜನಿ ರಾಘವನ್ ಮುಂತಾದವರು ನಟಿಸಿದ್ದು, ಈ ಚಿತ್ರವು ಬರಗೂರರ ಜನಪ್ರಿಯ ಕಾದಂಬರಿಯನ್ನು ಆಧರಿಸಿದೆ.

ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ಹಿಂದೆ ಒಂದು ಚಿತ್ರ ಯಶಸ್ವಿಯಾಗಿ ನೂರು ದಿನಗಳ ಕಾಲ ಪ್ರದರ್ಶನವಾದಾಗ ಒಂದು ಸಂಭ್ರಮವಿತ್ತು. ಈಗ 10 ದಿನಗಳಿಗೆ ಸಂಭ್ರಮವನ್ನು ಆಚರಿಸಲಾಗುತ್ತದೆ. ಆಗ ಒಂದು ಚಿತ್ರ 25-30 ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿತ್ತು. ಈಗ ಏಕಕಾಲಕ್ಕೆ ನೂರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತವೆ. ಕೆಲವು ಚಿತ್ರಗಳನ್ನು ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೇಳಿದ್ದೇನೆ. ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಮೂರ್ನಾಲ್ಕು ದಿನಗಳಲ್ಲಿ ಹಾಕಿದ ಬಂಡವಾಳ ವಾಪಸ್ಸು ಪಡೆಯುತ್ತವೆ ಎಂದು ಹೇಳಲಾಗುತ್ತದೆ. ಹಾಗಾಗಿ, 10 ದಿನಕ್ಕೆ ಸಂಭ್ರಮಾಚರಣೆ ಶುರುವಾಗಿದೆ’ ಎನ್ನುತ್ತಾರೆ.

10 ದಿನಕ್ಕೆ ಸಂಭ್ರಮ ಪಡುತ್ತೇವೆ ಎಂದರೆ, ನಮಗೆ ಹಿನ್ನಡೆಯಾಗುತ್ತಿದೆ ಎಂದರ್ಥ ಎನ್ನುವ ಬರಗೂರು, ‘ಈ ಕುರಿತು ನಾವು ಚರ್ಚೆ ಮಾಡುತ್ತಿಲ್ಲ. ಸಂಬಂಧಪಟ್ಟವರು ಕೂತು, ಯಾಕೆ ಹೀಗಾಗುತ್ತಿದೆ ಎಂದು ಚರ್ಚಿಸಬೇಕು. ಕಾರಣಗಳನ್ನು ಹುಡುಕಬೇಕು. ಒಬ್ಬೊಬ್ಬರಿಗೆ ಒಂದೊಂದು ಅಭಿಪ್ರಾಯಗಳಿರುತ್ತವೆ. ಕನ್ನಡ ಚಿತ್ರರಂಗದಲ್ಲಿ ಹಲವು ಸಂಘ-ಸಂಸ್ಥೆಗಳು ಸಕ್ರಿಯವಾಗಿವೆ. ಆ ಸಂಘ-ಸಂಸ್ಥೆಗಳು ಕೂತು ಚರ್ಚಿಸಬೇಕು. ಇದರಲ್ಲಿ ಸರ್ಕಾರವೂ ತೊಡಗಿಸಿಕೊಳ್ಳಬೇಕು. ಅಂತಹ ಚರ್ಚೆಯಿಂದ ಮಾತ್ರ ನಾವು ಎಲ್ಲಿ ಎಡವುತ್ತಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಸಾಧ್ಯ’ ಎನ್ನುತ್ತಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

10 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

11 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

11 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

12 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

12 hours ago