ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು: ಬಿ.ಸಿ ಪಾಟೀಲ್‌

ಹಾವೇರಿ: ದರ್ಶನ್‌ ಆಪ್ತೆಗೆ ಮರ್ಮಾಂಗದ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್‌ ಹಾಗೂ ಅವರ ಗ್ಯಾಂಗ್‌ನವರು ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಪವಿತ್ರಾ ಗೌಡ, ದರ್ಶನ್‌ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.

ಇತ್ತ ಕನ್ನಡ ಚಿತ್ರರಂಗ ಸೇರಿದಂತೆ ಹಲವಾರು ಜನರು ಈ ಕೃತ್ಯವನ್ನು ಖಂಡಿಸಿದ್ದಾರೆ. ಅದರಲ್ಲೂ ಕನ್ನಡದ ಹಿರಿಯ ನಟ, ರಾಜಕಾರಣಿ ಬಿ.ಸಿ ಪಾಟೀಲ್‌ ಈ ಹತ್ಯೆಯ ಬಗ್ಗೆ ಮಾತನಾಡಿದ್ದಾರೆ.

ದರ್ಶನ್‌ ಪ್ರಕರಣ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಿ.ಸಿ ಪಾಟೀಲ್‌ ಅವರು ಖಾರವಾಗಿ ಉತ್ತರಿಸಿದರು. ರೇಣುಕಾಸ್ವಾಮಿ ಕೃತ್ಯ ನಡೆದಿರುವುದು ಹೇಯ ಕೃತ್ಯ. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ಕೇಸ್‌ನಲ್ಲಿ ಯಾರೇ ತಪ್ಪಿತಸ್ಥರಿದ್ದರು ಸಹಾ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೇ ಆಗಿದ್ದರು ಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಬಿ.ಸಿ ಪಾಟೀಲ್‌ ಕಿಡಿಕಾರಿದರು.

ಈ ಪ್ರಕರಣದಲ್ಲಿ ನಿಷ್ಪಕ್ಷಪಾತ, ನ್ಯಾಯಯುತವಾದ ತನಿಖೆ ಆಗಬೇಕು. ದರ್ಶನ್‌ ಈಗ ಆರೋಪಿಯಾಗಿದ್ದಾರೆ. ಅಪರಾಧ ಸಾಭೀತಾದ ಬಳಿಕ ಚಿತ್ರರಂಗದಿಂದ ಬ್ಯಾನ್‌ ಮಾಡಬೇಕೋ ಇಲ್ಲವೋ ಎಂಬುದನ್ನು ತೀರ್ಮಾನಿಸುತ್ತಾರೆ. ದರ್ಶನ್‌ ಅವರನ್ನು ಬ್ಯಾನ್‌ ಮಾಡಲು ಆಗಲ್ಲ ಎಂದು ಈಗಾಗಲೇ ಚಿತ್ರಮಂಡಳಿ ಹೇಳಿದ್ದು, ಅಪರಾಧ ಸಾಭೀತಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಇನ್ನು ನಟ ದರ್ಶನ್‌ ಬಗ್ಗೆ ಮಾತನಾಡಿರುವ ಅವರು, ದರ್ಶನ್‌ ನನಗೆ ಕಲಾವಿದನಾಗಿ, ಚಿತ್ರರಂಗದ ಸ್ನೇಹಿತನಾಗಿ ಮಾತ್ರ ಗೊತ್ತು. ಅವರ ವೈಯಕ್ತಿಕ ವಿಚಾರಗಳ ಬಗ್ಗೆ ನನಗೆ ಮಾಹಿತಿಯಿಲ್ಲ. ನಾನು ಕೃಷಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರನ್ನು ಕೃಷಿ ಇಲಾಖೆ ಪ್ರಚಾರ ರಾಯಭಾರಿಯನ್ನಾಗಿ ಮಾಡಿದ್ದೆ. ಇದರ ಉದ್ದೇಶ ರೈತರಿಗೆ ಶಕ್ತಿ ತುಂಬುವುದಾಗಿತ್ತು. ನಾವು ರಾಯಭಾರಿಯನ್ನಾಗಿ ನೇಮಕ ಮಾಡಿದ್ದ ಸಮಯದಲ್ಲಿ ದರ್ಶನ್‌ ಈ ರೀತಿಯ ಕೃತ್ಯ ಎಸಗಿರಲಿಲ್ಲ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

20 mins ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

33 mins ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

1 hour ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

5 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

9 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

9 hours ago