ಹಾವೇರಿ: ದರ್ಶನ್ ಆಪ್ತೆಗೆ ಮರ್ಮಾಂಗದ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ಹಾಗೂ ಅವರ ಗ್ಯಾಂಗ್ನವರು ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಪವಿತ್ರಾ ಗೌಡ, ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.
ಇತ್ತ ಕನ್ನಡ ಚಿತ್ರರಂಗ ಸೇರಿದಂತೆ ಹಲವಾರು ಜನರು ಈ ಕೃತ್ಯವನ್ನು ಖಂಡಿಸಿದ್ದಾರೆ. ಅದರಲ್ಲೂ ಕನ್ನಡದ ಹಿರಿಯ ನಟ, ರಾಜಕಾರಣಿ ಬಿ.ಸಿ ಪಾಟೀಲ್ ಈ ಹತ್ಯೆಯ ಬಗ್ಗೆ ಮಾತನಾಡಿದ್ದಾರೆ.
ದರ್ಶನ್ ಪ್ರಕರಣ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಿ.ಸಿ ಪಾಟೀಲ್ ಅವರು ಖಾರವಾಗಿ ಉತ್ತರಿಸಿದರು. ರೇಣುಕಾಸ್ವಾಮಿ ಕೃತ್ಯ ನಡೆದಿರುವುದು ಹೇಯ ಕೃತ್ಯ. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಈ ಕೇಸ್ನಲ್ಲಿ ಯಾರೇ ತಪ್ಪಿತಸ್ಥರಿದ್ದರು ಸಹಾ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೇ ಆಗಿದ್ದರು ಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಬಿ.ಸಿ ಪಾಟೀಲ್ ಕಿಡಿಕಾರಿದರು.
ಈ ಪ್ರಕರಣದಲ್ಲಿ ನಿಷ್ಪಕ್ಷಪಾತ, ನ್ಯಾಯಯುತವಾದ ತನಿಖೆ ಆಗಬೇಕು. ದರ್ಶನ್ ಈಗ ಆರೋಪಿಯಾಗಿದ್ದಾರೆ. ಅಪರಾಧ ಸಾಭೀತಾದ ಬಳಿಕ ಚಿತ್ರರಂಗದಿಂದ ಬ್ಯಾನ್ ಮಾಡಬೇಕೋ ಇಲ್ಲವೋ ಎಂಬುದನ್ನು ತೀರ್ಮಾನಿಸುತ್ತಾರೆ. ದರ್ಶನ್ ಅವರನ್ನು ಬ್ಯಾನ್ ಮಾಡಲು ಆಗಲ್ಲ ಎಂದು ಈಗಾಗಲೇ ಚಿತ್ರಮಂಡಳಿ ಹೇಳಿದ್ದು, ಅಪರಾಧ ಸಾಭೀತಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಇನ್ನು ನಟ ದರ್ಶನ್ ಬಗ್ಗೆ ಮಾತನಾಡಿರುವ ಅವರು, ದರ್ಶನ್ ನನಗೆ ಕಲಾವಿದನಾಗಿ, ಚಿತ್ರರಂಗದ ಸ್ನೇಹಿತನಾಗಿ ಮಾತ್ರ ಗೊತ್ತು. ಅವರ ವೈಯಕ್ತಿಕ ವಿಚಾರಗಳ ಬಗ್ಗೆ ನನಗೆ ಮಾಹಿತಿಯಿಲ್ಲ. ನಾನು ಕೃಷಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರನ್ನು ಕೃಷಿ ಇಲಾಖೆ ಪ್ರಚಾರ ರಾಯಭಾರಿಯನ್ನಾಗಿ ಮಾಡಿದ್ದೆ. ಇದರ ಉದ್ದೇಶ ರೈತರಿಗೆ ಶಕ್ತಿ ತುಂಬುವುದಾಗಿತ್ತು. ನಾವು ರಾಯಭಾರಿಯನ್ನಾಗಿ ನೇಮಕ ಮಾಡಿದ್ದ ಸಮಯದಲ್ಲಿ ದರ್ಶನ್ ಈ ರೀತಿಯ ಕೃತ್ಯ ಎಸಗಿರಲಿಲ್ಲ ಎಂದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…