ಮನರಂಜನೆ

ಮೊದಲ ಬಾಲಿವುಡ್‍ ಚಿತ್ರ ಬಿಡುಗಡೆಗೂ ಮೊದಲೇ ಶ್ರೀಲೀಲಾಗೆ ಇನ್ನೊಂದು ಆಫರ್‌

ಶ್ರೀಲೀಲಾ, ಕಾರ್ತಿಕ್‍ ಆರ್ಯನ್‍ ಅಭಿನಯದ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಹಿಂದಿಯ ಇನ್ನೊಂದು ಚಿತ್ರದಲ್ಲಿ ಶ್ರೀಲೀಲಾ ನಟಿಸುತ್ತಿರುವ ಸುದ್ದಿಯೊಂದು ಕೇಳಿ ಬಂದಿದೆ. ಈ ಬಾರಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ನಟಿಸುತ್ತಾರೆ ಎಂದು ಹೇಳಲಾಗಿದೆ.

ಈ ಹಿಂದೆ ತೆಲುಗಿನಲ್ಲಿ ‘ಡ್ರೀಮ್ ಗರ್ಲ್’ ಎಂಬ ಚಿತ್ರ ನಿರ್ದೇಶನ ಮಾಡಿದ್ದ ರಾಜ್‍ ಶಾಂಡಿಲ್ಯ, ಇದೀಗ ಸಿದ್ಧಾರ್ಥ್‍ ಮಲ್ಹೋತ್ರಾ ಅವರನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ಇದ್ದು, ಒಬ್ಬ ನಾಯಕಿಯ ಪಾತ್ರಕ್ಕೆ ಶ್ರೀಲೀಲಾ ಅವರನ್ನು ಕೇಳಲಾಗಿದೆಯಂತೆ. ಇನ್ನೊಂದು ಪಾತ್ರಕ್ಕೆ ಅನನ್ಯ ಪಾಂಡೆ ಅವರನ್ನು ಸಂಪರ್ಕಿಸಲಾಗಿದೆಯಂತೆ. ಈ ಚಿತ್ರ ಯಾವಾಗ ಶುರುವಾಗುತ್ತದೆ, ಯಾರೆಲ್ಲಾ ಇರುತ್ತಾರೆ ಎಂಬುದರ ಕುರಿತು ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಶ್ರೀಲೀಲಾ ಅಭಿನಯದ ಯಾವೊಂದು ತೆಲುಗು ಚಿತ್ರವೂ ದೊಡ್ಡ ಯಶಸ್ಸು ಕಾಣದಿದ್ದರೂ, ಆಕೆಯ ಬೇಡಿಕೆ ಸ್ವಲ್ಪವೂ ಕಡಿಮೆಯಾಗಿಲ್ಲ. ಅದಕ್ಕೆ ಕಾರಣ, ‘ಪುಷ್ಪ 2’ ಚಿತ್ರದ ಐಟಂ ಸಾಂಗ್‍. ‘ಪುಷ್ಪ 2’ ಚಿತ್ರದ ‘ಕಿಸ್ಸಿಕ್‍’ ಎಂಬ ಐಟಂ ಹಾಡಿಗೆ ಶ್ರೀಲೀಲಾ ಹೆಜ್ಜೆ ಹಾಕಿದ್ದು, ಈ ಹಾಡು ಸಾಕಷ್ಟು ಜನಪ್ರಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ.

ಇತ್ತೀಚೆಗೆ ನಿತಿನ್‍ ಮತ್ತು ಶ್ರೀಲೀಲಾ ಅಭಿನಯದ ‘ರಾಬಿನ್‍ಹುಡ್‍’ ಚಿತ್ರ ಬಿಡುಗಡೆಯಾಯಿತು. ಈ ಚಿತ್ರ ಬಂದಿದ್ದೂ ಗೊತ್ತಾಗಲಿಲ್ಲ, ಹೋಗಿದ್ದೂ ಗೊತ್ತಾಗಲಿಲ್ಲ. ಆ ಮಟ್ಟಿಗೆ ಫ್ಲಾಪ್‍ ಎಂದನಿಸಿಕೊಂಡಿತು. ಹೀಗಿರುವಾಗಲೇ, ರವಿತೇಜ ಅಭಿನಯದ ‘ಮಾಸ್ ಜಾತ್ರ’ ಎಂಬ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಶ್ರೀಲೀಲಾ, ತಮಿಳಿನಲ್ಲಿ ಶಿವಕಾರ್ತಿಕೇಯನ್‍ ಅಭಿನಯದ ‘ಪರಾಶಕ್ತಿ’ ಎಂಬ ಚಿತ್ರದಲ್ಲೂ ನಟಿಸುತ್ತಿದ್ದಾರೆ ಎನ್ನುವುದು ವಿಶೇಷ.

ಇನ್ನು, ಶ್ರೀಲೀಲಾ ನಟಿಸುತ್ತಿರುವ ಏಕೈಕ ಚಿತ್ರ ಎಂದರೆ ಅದು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ ಅಭಿನಯದ ‘ಜ್ಯೂನಿಯರ್’ ಮಾತ್ರ. ಆ ಚಿತ್ರವು ಕನ್ನಡವಷ್ಟೇ ಅಲ್ಲದೆ, ತೆಲುಗಿನಲ್ಲೂ ತಯಾರಾಗುತ್ತಿದೆ. ಈ ಚಿತ್ರ ಭರ್ಜರಿಯಾಗಿ ಪ್ರಾರಂಭವಾದರೈ, ಕೆಲವು ತಿಂಗಳುಗಳಿಂದ ಯಾವುದೇ ಸುದ್ದಿ ಇಲ್ಲ. ಚಿತ್ರ ನಿಂತಿದೆಯೋ, ಮುಂದುವರೆಯುತ್ತದೋ ಎಂಬುದರ ಕುರಿತು ಸಹ ಸೂಕ್ತ ಮಾಹಿತಿ ಇಲ್ಲ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

9 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

9 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

10 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

11 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

16 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

16 hours ago