ಮನರಂಜನೆ

ಮೊದಲ ಬಾಲಿವುಡ್‍ ಚಿತ್ರ ಬಿಡುಗಡೆಗೂ ಮೊದಲೇ ಶ್ರೀಲೀಲಾಗೆ ಇನ್ನೊಂದು ಆಫರ್‌

ಶ್ರೀಲೀಲಾ, ಕಾರ್ತಿಕ್‍ ಆರ್ಯನ್‍ ಅಭಿನಯದ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಹಿಂದಿಯ ಇನ್ನೊಂದು ಚಿತ್ರದಲ್ಲಿ ಶ್ರೀಲೀಲಾ ನಟಿಸುತ್ತಿರುವ ಸುದ್ದಿಯೊಂದು ಕೇಳಿ ಬಂದಿದೆ. ಈ ಬಾರಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ನಟಿಸುತ್ತಾರೆ ಎಂದು ಹೇಳಲಾಗಿದೆ.

ಈ ಹಿಂದೆ ತೆಲುಗಿನಲ್ಲಿ ‘ಡ್ರೀಮ್ ಗರ್ಲ್’ ಎಂಬ ಚಿತ್ರ ನಿರ್ದೇಶನ ಮಾಡಿದ್ದ ರಾಜ್‍ ಶಾಂಡಿಲ್ಯ, ಇದೀಗ ಸಿದ್ಧಾರ್ಥ್‍ ಮಲ್ಹೋತ್ರಾ ಅವರನ್ನು ನಿರ್ದೇಶಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ಇದ್ದು, ಒಬ್ಬ ನಾಯಕಿಯ ಪಾತ್ರಕ್ಕೆ ಶ್ರೀಲೀಲಾ ಅವರನ್ನು ಕೇಳಲಾಗಿದೆಯಂತೆ. ಇನ್ನೊಂದು ಪಾತ್ರಕ್ಕೆ ಅನನ್ಯ ಪಾಂಡೆ ಅವರನ್ನು ಸಂಪರ್ಕಿಸಲಾಗಿದೆಯಂತೆ. ಈ ಚಿತ್ರ ಯಾವಾಗ ಶುರುವಾಗುತ್ತದೆ, ಯಾರೆಲ್ಲಾ ಇರುತ್ತಾರೆ ಎಂಬುದರ ಕುರಿತು ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಶ್ರೀಲೀಲಾ ಅಭಿನಯದ ಯಾವೊಂದು ತೆಲುಗು ಚಿತ್ರವೂ ದೊಡ್ಡ ಯಶಸ್ಸು ಕಾಣದಿದ್ದರೂ, ಆಕೆಯ ಬೇಡಿಕೆ ಸ್ವಲ್ಪವೂ ಕಡಿಮೆಯಾಗಿಲ್ಲ. ಅದಕ್ಕೆ ಕಾರಣ, ‘ಪುಷ್ಪ 2’ ಚಿತ್ರದ ಐಟಂ ಸಾಂಗ್‍. ‘ಪುಷ್ಪ 2’ ಚಿತ್ರದ ‘ಕಿಸ್ಸಿಕ್‍’ ಎಂಬ ಐಟಂ ಹಾಡಿಗೆ ಶ್ರೀಲೀಲಾ ಹೆಜ್ಜೆ ಹಾಕಿದ್ದು, ಈ ಹಾಡು ಸಾಕಷ್ಟು ಜನಪ್ರಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ.

ಇತ್ತೀಚೆಗೆ ನಿತಿನ್‍ ಮತ್ತು ಶ್ರೀಲೀಲಾ ಅಭಿನಯದ ‘ರಾಬಿನ್‍ಹುಡ್‍’ ಚಿತ್ರ ಬಿಡುಗಡೆಯಾಯಿತು. ಈ ಚಿತ್ರ ಬಂದಿದ್ದೂ ಗೊತ್ತಾಗಲಿಲ್ಲ, ಹೋಗಿದ್ದೂ ಗೊತ್ತಾಗಲಿಲ್ಲ. ಆ ಮಟ್ಟಿಗೆ ಫ್ಲಾಪ್‍ ಎಂದನಿಸಿಕೊಂಡಿತು. ಹೀಗಿರುವಾಗಲೇ, ರವಿತೇಜ ಅಭಿನಯದ ‘ಮಾಸ್ ಜಾತ್ರ’ ಎಂಬ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಶ್ರೀಲೀಲಾ, ತಮಿಳಿನಲ್ಲಿ ಶಿವಕಾರ್ತಿಕೇಯನ್‍ ಅಭಿನಯದ ‘ಪರಾಶಕ್ತಿ’ ಎಂಬ ಚಿತ್ರದಲ್ಲೂ ನಟಿಸುತ್ತಿದ್ದಾರೆ ಎನ್ನುವುದು ವಿಶೇಷ.

ಇನ್ನು, ಶ್ರೀಲೀಲಾ ನಟಿಸುತ್ತಿರುವ ಏಕೈಕ ಚಿತ್ರ ಎಂದರೆ ಅದು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ ಅಭಿನಯದ ‘ಜ್ಯೂನಿಯರ್’ ಮಾತ್ರ. ಆ ಚಿತ್ರವು ಕನ್ನಡವಷ್ಟೇ ಅಲ್ಲದೆ, ತೆಲುಗಿನಲ್ಲೂ ತಯಾರಾಗುತ್ತಿದೆ. ಈ ಚಿತ್ರ ಭರ್ಜರಿಯಾಗಿ ಪ್ರಾರಂಭವಾದರೈ, ಕೆಲವು ತಿಂಗಳುಗಳಿಂದ ಯಾವುದೇ ಸುದ್ದಿ ಇಲ್ಲ. ಚಿತ್ರ ನಿಂತಿದೆಯೋ, ಮುಂದುವರೆಯುತ್ತದೋ ಎಂಬುದರ ಕುರಿತು ಸಹ ಸೂಕ್ತ ಮಾಹಿತಿ ಇಲ್ಲ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

1 hour ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

2 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

2 hours ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

2 hours ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

5 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

5 hours ago