ಮನರಂಜನೆ

ಬೆಂಗಳೂರು ರೇವ್‌ ಪಾರ್ಟಿ ಪ್ರಕರಣ: ನಟಿ ಹೇಮಾ ಅಸಲಿ ಮುಖ ಬಯಲು

ಬೆಂಗಳೂರು: ನಿನ್ನೆ ( ಮೇ 21 ) ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಜಿಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇನ್ನು ಈ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಸೇರಿದಂತೆ ಹಲವು ಕಲಾವಿದರು ಹಾಗೂ ಮಾಡೆಲ್‌ಗಳು ಭಾಗಿಯಾಗಿದ್ದರು ಎಂದು ಸುದ್ದಿಯಾಗಿತ್ತು. ಹೀಗೆ ಈ ಸುದ್ದಿಯಲ್ಲಿ ತನ್ನ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಹೇಮಾ ತಾನು ಈ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿಲ್ಲ ಮತ್ತು ತಾನು ಹೈದರಾಬಾದ್‌ನ ಫಾರ್ಮ್‌ಹೌಸ್‌ನಲ್ಲಿ ಇರುವುದಾಗಿ ಹೇಳಿಕೊಂಡಿದ್ದರು.

ಆದರೆ ಇದೀಗ ಬೆಂಗಳೂರು ಪೊಲೀಸರು ಹಂಚಿಕೊಂಡಿರುವ ಪಾರ್ಟಿಯ ವಿಡಿಯೊದಲ್ಲಿ ನಟಿ ಹೇಮಾ ಇರುವುದು ಖಚಿತವಾಗಿದೆ. ಈ ವಿಚಾರವನ್ನು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಸ್ಪಷ್ಟಪಡಿಸಿದ್ದು, ನಟಿಯ ಅಸಲಿ ಮುಖ ಬಯಲಾಗಿದೆ.

ʼಸನ್‌ ಸೆಟ್‌ ಟು ಸನ್‌ ರೈಸ್‌ ವಿಕ್ಟರಿʼ ಎಂಬ ಹೆಸರಿನ ಅಡಿಯಲ್ಲಿ ಆಯೋಜನೆಯಾಗಿದ್ದ ಈ ಪಾರ್ಟಿಯನ್ನು ಸಂಜೆಯಿಂದ ಬೆಳಗ್ಗೆವರೆಗೆ ನಡೆಸಲು ಯೋಜನೆ ರೂಪಿಸಲಾಗಿತ್ತು. ಈ ಪಾರ್ಟಿಯಲ್ಲಿ ಕೊಕೈನ್‌, ಎಂಡಿಎಂಎ ಪಿಲ್ಸ್‌ ಸೇರಿದಂತೆ ಹಲವಾರು ಮಾದಕ ವಸ್ತುಗಳ ಮಾರಾಟ ನಡೆದಿತ್ತು ಎನ್ನಲಾಗಿದೆ. ಹೇಮಾ ಹಂಚಿಕೊಂಡ ವಿಡಿಯೊ ಬಗ್ಗೆ ಮಾತನಾಡಿದ ದಯಾನಂದ್‌ ʼಹೇಮಾ ಪಾರ್ಟಿಯಲ್ಲಿ ಭಾಗಿಯಾಗಿದ್ದು ಸತ್ಯʼ ಎಂದಿದ್ದಾರೆ. ಅಲ್ಲದೇ ʼಯಾವ ಸಂದರ್ಭದಲ್ಲಿ ವಿಡಿಯೊ ಮಾಡಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆʼ ಎಂದು ಹೇಳಿಕೆ ನೀಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

10 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago