bhageeeratha movie
ಮೈಸೂರು ಮೂಲದ ಜಯಪ್ರಕಾಶ್ ಅಲಿಯಾಸ್ ಜೆಪಿ ಅಭಿನಯದ ‘ಭಗೀರಥ’ ಚಿತ್ರವು ಫೆಬ್ರವರಿ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರವು ಇದೀಗ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಚಿತ್ರತಂಡ ಘೋಷಿಸಿದೆ. ಚಿತ್ರವು ಬೆಂಗಳೂರಿನ ಸಪ್ನ ಮುಂತಾದ ಕಡೆ 100 ದಿನ ಪ್ರದರ್ಶನವಾಗಿದೆ ಎಂಬ ಪೋಸ್ಟರ್ಗಳು ಕೆಲವು ಕಡೆ ರಾರಾಜಿಸುತ್ತಿವೆ.
ಕನ್ನಡದಲ್ಲಿ ಒಂದು ಚಿತ್ರ 100 ದಿನ ಪ್ರದರ್ಶನ ಕಂಡು ಎಷ್ಟು ಕಾಲವಾಯಿತೋ ಗೊತ್ತಿಲ್ಲ. ಕೆಲವು ಚಿತ್ರಗಳು ಒಂದು ವಾರ ಪೂರೈಸುವುದೇ ಕಷ್ಟವಾಗಿರುವಾಗ, ‘ಭಗೀರಥ’ ಚಿತ್ರವು 100 ದಿನ ಪ್ರದರ್ಶನ ಕಂಡಿದ್ದು ವಿಶೇಷ. ಅದರ ಜೊತೆಗೆ ಚಿತ್ರವು ಎಷ್ಟು ಗಳಿಕೆ ಮಾಡಿದೆ, ಎಲ್ಲೆಲ್ಲಿ ಎಷ್ಟು ಪ್ರದರ್ಶನ ಕಂಡಿದೆ ಎಂಬ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.
‘ಭಗೀರಥ’ ಚಿತ್ರವನ್ನು ನಿರ್ದೇಶಿಸಿರುವವರು ರಾಮ್ ಜನಾರ್ಧನ್. ‘ಬಾಯ್ಫ್ರೆಂಡ್’ ಚಿತ್ರದ ಮೂಲಕ ನಿರ್ದೇಶಕರಾಗಿದ್ದ ಅವರು, ಆ ನಂತರ ‘ಅಂಜದಿರು’ ಮತ್ತು ‘ಸ್ವಯಂಕೃಷಿ’ ಎಂಬ ಇನ್ನೆರಡು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಇದೀಗ ‘ಭಗೀರತ’ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಯಾವುದಕ್ಕೂ ಹೆದರದ ಮತ್ತು ಅಪಾರ ಇಚ್ಛಾಶಕ್ತಿ ಇರುವ ಮನುಷ್ಯನ ಪಾತ್ರದಲ್ಲಿ ಜೆಪಿ ನಟಿಸಿದ್ದಾರೆ. ನಾಯಕಿಯನ್ನು ಉಳಿಸಲು ನಾಯಕನ ‘ಭಗೀರಥ’ ಪ್ರಯತ್ನವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಈ ಚಿತ್ರವನ್ನು ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಬಿ. ಭೈರಪ್ಪ ಹಾಗೂ ಕೆ. ರಮೇಶ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.
‘ಭಗೀರಥ’ ಚಿತ್ರದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿ ಕಾಳೆ, ಶ್ರೀನಿವಾಸಪ್ರಭು, ಬಲ ರಾಜವಾಡಿ, ನಯನ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ಹಾಗೂ ಸೂರಿ ಚಿತ್ತೂರು ಛಾಯಾಗ್ರಹಣವಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…