ಮನರಂಜನೆ

ಅಕ್ಟೋಬರ್ ಮೂರರಂದು ‘ಭೈರಾದೇವಿ’ ಬಿಡುಗಡೆ

ರಾಧಿಕಾ ಕುಮಾರಸ್ವಾಮಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡು ವರ್ಷಗಳೇ ಆಗಿವೆ. ಬಿಡುಗಡೆಯಾದ ಅವರ ‘ಒಪ್ಪಂದ’ ಹಾಗೂ ‘ರವಿ ಬೋಪಣ್ಣ’ ಚಿತ್ರಗಳು ಬಂದಿದ್ದೂ ಗೊತ್ತಾಗಲಿಲ್ಲ. ಹೋಗಿದ್ದೂ ಗೊತ್ತಾಗಲಿಲ್ಲ. ಹೀಗಿರುವಾಗಲೇ, ರಾಧಿಕಾ ನಟಿಸಿರುವ ‘ಭೈರಾದೇವಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದ್ದು, ಪ್ರಚಾರದ ಕೆಲಸಗಳು ಸಹ ಪ್ರಾರಂಭವಾಗಿದೆ.

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗಿಯೂ ನಟಿಸಿರುವ ‘ಭೈರಾದೃವಿ’ ಚಿತ್ರ ಅಕ್ಟೋಬರ್ 3 ರಂದು ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

ಬಿಡುಗಡೆ ದಿನಾಂಕ ಘೋಷಣೆ ಯಾಗಿರುವುದರಿಂದ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ ‘ಭೈರಾದೇವಿ’ ಚಿತ್ರದ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಧಿಕಾ ಸ್ವತಃ ತಾವೇ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ನೂರಾರು ಪುರುಷ ಹಾಗೂ ಮಹಿಳಾ ಆಟೋ ಚಾಲಕರು ಉಪಸ್ಥಿತರಿದ್ದರು. ‘ಭೈರಾದೇವಿ’ ಚಿತ್ರದ ಪೋಸ್ಟರ್ ವುಳ್ಳ ಟ್ಯಾಬ್ಲೊ ಹಾಗೂ ಆಟೋಗಳು ರಾಜ್ಯಾದ್ಯಂತ ಸಂಚರಿಸಲಿದೆ.

‘ಭೈರಾದೇವಿ’ ಚಿತ್ರವು ಐದು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ತಡವಾಗಿ ಇದೀಗ ಬಿಡುಗಡೆ ಆಗುತ್ತಿದೆ. ಈ ಹಿಂದೆ ‘ಆರ್‍ಎಕ್ಸ್ ಸೂರಿ’ ನಿರ್ದೇಶಿಸದ್ದ ಶ್ರೀಜೈ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್ ಹಾಗೂ ಯಾದವ್ ಅವರ ಸಹ ನಿರ್ಮಾಣವಿದೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತವಿದೆ.

‘ಭೈರಾದೇವಿ’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ರವಿಶಂಕರ್, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.

andolana

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

2 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

4 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

11 hours ago