ಮನರಂಜನೆ

ಅಕ್ಟೋಬರ್ ಮೂರರಂದು ‘ಭೈರಾದೇವಿ’ ಬಿಡುಗಡೆ

ರಾಧಿಕಾ ಕುಮಾರಸ್ವಾಮಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡು ವರ್ಷಗಳೇ ಆಗಿವೆ. ಬಿಡುಗಡೆಯಾದ ಅವರ ‘ಒಪ್ಪಂದ’ ಹಾಗೂ ‘ರವಿ ಬೋಪಣ್ಣ’ ಚಿತ್ರಗಳು ಬಂದಿದ್ದೂ ಗೊತ್ತಾಗಲಿಲ್ಲ. ಹೋಗಿದ್ದೂ ಗೊತ್ತಾಗಲಿಲ್ಲ. ಹೀಗಿರುವಾಗಲೇ, ರಾಧಿಕಾ ನಟಿಸಿರುವ ‘ಭೈರಾದೇವಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದ್ದು, ಪ್ರಚಾರದ ಕೆಲಸಗಳು ಸಹ ಪ್ರಾರಂಭವಾಗಿದೆ.

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗಿಯೂ ನಟಿಸಿರುವ ‘ಭೈರಾದೃವಿ’ ಚಿತ್ರ ಅಕ್ಟೋಬರ್ 3 ರಂದು ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

ಬಿಡುಗಡೆ ದಿನಾಂಕ ಘೋಷಣೆ ಯಾಗಿರುವುದರಿಂದ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ ‘ಭೈರಾದೇವಿ’ ಚಿತ್ರದ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಧಿಕಾ ಸ್ವತಃ ತಾವೇ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ನೂರಾರು ಪುರುಷ ಹಾಗೂ ಮಹಿಳಾ ಆಟೋ ಚಾಲಕರು ಉಪಸ್ಥಿತರಿದ್ದರು. ‘ಭೈರಾದೇವಿ’ ಚಿತ್ರದ ಪೋಸ್ಟರ್ ವುಳ್ಳ ಟ್ಯಾಬ್ಲೊ ಹಾಗೂ ಆಟೋಗಳು ರಾಜ್ಯಾದ್ಯಂತ ಸಂಚರಿಸಲಿದೆ.

‘ಭೈರಾದೇವಿ’ ಚಿತ್ರವು ಐದು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ತಡವಾಗಿ ಇದೀಗ ಬಿಡುಗಡೆ ಆಗುತ್ತಿದೆ. ಈ ಹಿಂದೆ ‘ಆರ್‍ಎಕ್ಸ್ ಸೂರಿ’ ನಿರ್ದೇಶಿಸದ್ದ ಶ್ರೀಜೈ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್ ಹಾಗೂ ಯಾದವ್ ಅವರ ಸಹ ನಿರ್ಮಾಣವಿದೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತವಿದೆ.

‘ಭೈರಾದೇವಿ’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ರವಿಶಂಕರ್, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago