ಮನರಂಜನೆ

ಸ್ವಾತಂತ್ರ್ಯ ದಿನಕ್ಕಿಲ್ಲ ‘ಭೈರತಿ ರಣಗಲ್‍’; ಹೊಸ ದಿನಾಂಕ ಸದ್ಯದಲ್ಲೇ ಘೋಷಣೆ

ಶಿವರಾಜಕುಮಾರ್‍ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಭೈರತಿ ರಣಗಲ್‍’, ಸ್ವಾತಂತ್ರ್ಯ ದಿನದಂದು ಬಿಡುಗಡೆ ಆಗುವುದು ಸಂಶಯ ಎಂಬ ಮಾತು ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಆದರೆ, ಚಿತ್ರತಂಡದವರು ಮಾತ್ರ ಈ ಕುರಿತು ಯಾವುದೇ ಘೋಷಣೆ ಮಾಡಿರಲಿಲ್ಲ. ಈಗ ಚಿತ್ರ ಮುಂದಕ್ಕೆ ಹೋಗಿರುವ ವಿಷಯವನ್ನು ಸ್ವತಃ ಶಿವರಾಜಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ಭೈರತಿ ರಣಗಲ್‍’ ಚಿತ್ರವು ಆಗಸ್ಟ್ 15ರಂದು ಬಿಡಗುಡೆಯಾಗಲಿದೆ ಎಂದು ಚಿತ್ರತಂಡ ಕೆಲವು ತಿಂಗಳುಗಳ ಹಿಂದೆಯೇ ಘೋಷಿಸಿತ್ತು. ಆ ವಾರ ಲಾಂಗ್‍ ವೀಕೆಂಡ್‍ ಇರುವುದರಿಂದ ಮತ್ತು ಸತತವಾಗಿ ರಜೆಗಳು ಸಿಗುವ ಕಾರಣ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ಚಿತ್ರತಂಡಗಳು ಪೈಪೋಟಿ ನಡೆಸಿದ್ದವು. ಆಗಸ್ಟ್ 15ರ ಗುರುವಾರ ಸ್ವಾತಂತ್ರ್ಯ ದಿನಾಚರಣೆಯಾದರೆ, ಆಗಸ್ಟ್ 16ರ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವಿದೆ. ಇನ್ನು, ಶನಿವಾರ ಮತ್ತು ಭಾನುವಾರ ರಜೆಗಳಿವೆ.

ಹಾಗಾಗಿ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ನಿರೀಕ್ಷಿತ ಚಿತ್ರಗಳು ಪೈಪೋಟಿ ನಡೆಸಿದ್ದವು. ಅಂದು ರೋಹಿತ್‍ ಶೆಟ್ಟಿ ನಿರ್ದೇಶನದ, ಅಜಯ್‍ ದೇವಗನ್‍ ಅಭಿನಯದ ‘ಸಿಂಗಂ ಅಗೇನ್‍’, ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’ ಮತ್ತು ‘ಭೈರತಿ ರಣಗಲ್‍’ ಚಿತ್ರಗಳನ್ನು ಬಿಡುಗಡೆ ಮಾಡುವುದಾಗಿ ಆ ಚಿತ್ರತಂಡಗಳು ಘೋಷಿಸಿದ್ದವು.

ಆ ನಂತರ ‘ಸಿಂಗಂ ಅಗೇನ್‍’ ಅಂದುಕೊಂಡಂತೆಯೇ ಬಿಡುಗಡೆ ಆಗುವುದಿಲ್ಲ ಎಂದು ಹೇಳಲಾಯ್ತು. ಆ ನಂತರ ‘ಪುಷ್ಪ 2’ ಚಿತ್ರ ಸಹ ಡಿಸೆಂಬರ್‍ ಮೊದಲ ವಾರಕ್ಕೆ ಮುಂದೂಡಲಾಯ್ತು. ಈಗ ‘ಭೈರತಿ ರಣಗಲ್‍’ ಸಹ ಮುಂದಕ್ಕೆ ಹೋಗಿದೆಯಂತೆ.

ಈ ಕುರಿತು ಮಾತನಾಡಿರುವ ಶಿವರಾಜಕುಮಾರ್‍, ‘ಚಿತ್ರದ ಕೆಲಸಗಳು ಇನ್ನೂ ನಡೆಯುತ್ತಿರುವುದರಿಂದ ಮತ್ತು ಆಗಸ್ಟ್ 15ರ ಹೊತ್ತಿಗೆ ಮುಗಿಯುವುದು ಸಂಶಯವಿರುವುದರಿಂದ ಚಿತ್ರವನ್ನು ಎರಡ್ಮೂರು ವಾರ ಮುಂದಕ್ಕೆ ಹೋಗಲಿದೆ. ಸದ್ಯಕ್ಕೆ ಹೊಸ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಸಮಯ ನೋಡಿಕೊಂಡು ತಿಳಿಸುತ್ತೇವೆ’ ಎಂದು ಹೇಳಿದ್ದಾರೆ.

‘ಭೈರತಿ ರಣಗಲ್‍’ ಚಿತ್ರೀಕರಣ ಹಾಗೂ ಬೇರೆ ಕೆಲಸಗಳು ಮುಗಿದಿಲ್ಲ. ಈಗಾಗಲೇ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಮಧ್ಯೆ, ಶಿವರಾಜಕುಮಾರ್‍ ತಮ್ಮ ಪತ್ನಿ ಗೀತಾ ಶಿವರಾಜಕುಮಾರ್‍ ಅವರ ಚುನಾವಣಾ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಬೀಡುಬಿಟ್ಟಿದ್ದರಿಂದ, ಅವರ ಭಾಗದ ಚಿತ್ರೀಕರಣ ಮುಗಿದಿಲ್ಲ. ಹಾಗಾಗಿ, ಚಿತ್ರವನ್ನು ಮುಂದೂಡುವ ಯೋಚನೆಗೆ ಚಿತ್ರತಂಡ ಬಂದಿದೆ.

‘ಭೈರತಿ ರಣಗಲ್‍’ ಮುಂದಕ್ಕೆ ಹೋಗಿರುವುದರಿಂದ, ಕಣದಲ್ಲಿ ಎರಡು ಚಿತ್ರಗಳು ಮಾತ್ರ ಉಳಿದಿವೆ. ಸ್ವಾತಂತ್ರ್ಯದ ದಿನ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ‘ಗೌರಿ’ ಚಿತ್ರಗಳು ಮಾತ್ರ ಬಿಡುಗಡೆ ಆಗಲಿವೆ.

ಭೂಮಿಕಾ

Recent Posts

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

6 mins ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

5 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

5 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

5 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

5 hours ago