ಮನರಂಜನೆ

ಸ್ವಾತಂತ್ರ್ಯ ದಿನಕ್ಕಿಲ್ಲ ‘ಭೈರತಿ ರಣಗಲ್‍’; ಹೊಸ ದಿನಾಂಕ ಸದ್ಯದಲ್ಲೇ ಘೋಷಣೆ

ಶಿವರಾಜಕುಮಾರ್‍ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಭೈರತಿ ರಣಗಲ್‍’, ಸ್ವಾತಂತ್ರ್ಯ ದಿನದಂದು ಬಿಡುಗಡೆ ಆಗುವುದು ಸಂಶಯ ಎಂಬ ಮಾತು ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಆದರೆ, ಚಿತ್ರತಂಡದವರು ಮಾತ್ರ ಈ ಕುರಿತು ಯಾವುದೇ ಘೋಷಣೆ ಮಾಡಿರಲಿಲ್ಲ. ಈಗ ಚಿತ್ರ ಮುಂದಕ್ಕೆ ಹೋಗಿರುವ ವಿಷಯವನ್ನು ಸ್ವತಃ ಶಿವರಾಜಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ಭೈರತಿ ರಣಗಲ್‍’ ಚಿತ್ರವು ಆಗಸ್ಟ್ 15ರಂದು ಬಿಡಗುಡೆಯಾಗಲಿದೆ ಎಂದು ಚಿತ್ರತಂಡ ಕೆಲವು ತಿಂಗಳುಗಳ ಹಿಂದೆಯೇ ಘೋಷಿಸಿತ್ತು. ಆ ವಾರ ಲಾಂಗ್‍ ವೀಕೆಂಡ್‍ ಇರುವುದರಿಂದ ಮತ್ತು ಸತತವಾಗಿ ರಜೆಗಳು ಸಿಗುವ ಕಾರಣ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ಚಿತ್ರತಂಡಗಳು ಪೈಪೋಟಿ ನಡೆಸಿದ್ದವು. ಆಗಸ್ಟ್ 15ರ ಗುರುವಾರ ಸ್ವಾತಂತ್ರ್ಯ ದಿನಾಚರಣೆಯಾದರೆ, ಆಗಸ್ಟ್ 16ರ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವಿದೆ. ಇನ್ನು, ಶನಿವಾರ ಮತ್ತು ಭಾನುವಾರ ರಜೆಗಳಿವೆ.

ಹಾಗಾಗಿ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ನಿರೀಕ್ಷಿತ ಚಿತ್ರಗಳು ಪೈಪೋಟಿ ನಡೆಸಿದ್ದವು. ಅಂದು ರೋಹಿತ್‍ ಶೆಟ್ಟಿ ನಿರ್ದೇಶನದ, ಅಜಯ್‍ ದೇವಗನ್‍ ಅಭಿನಯದ ‘ಸಿಂಗಂ ಅಗೇನ್‍’, ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’ ಮತ್ತು ‘ಭೈರತಿ ರಣಗಲ್‍’ ಚಿತ್ರಗಳನ್ನು ಬಿಡುಗಡೆ ಮಾಡುವುದಾಗಿ ಆ ಚಿತ್ರತಂಡಗಳು ಘೋಷಿಸಿದ್ದವು.

ಆ ನಂತರ ‘ಸಿಂಗಂ ಅಗೇನ್‍’ ಅಂದುಕೊಂಡಂತೆಯೇ ಬಿಡುಗಡೆ ಆಗುವುದಿಲ್ಲ ಎಂದು ಹೇಳಲಾಯ್ತು. ಆ ನಂತರ ‘ಪುಷ್ಪ 2’ ಚಿತ್ರ ಸಹ ಡಿಸೆಂಬರ್‍ ಮೊದಲ ವಾರಕ್ಕೆ ಮುಂದೂಡಲಾಯ್ತು. ಈಗ ‘ಭೈರತಿ ರಣಗಲ್‍’ ಸಹ ಮುಂದಕ್ಕೆ ಹೋಗಿದೆಯಂತೆ.

ಈ ಕುರಿತು ಮಾತನಾಡಿರುವ ಶಿವರಾಜಕುಮಾರ್‍, ‘ಚಿತ್ರದ ಕೆಲಸಗಳು ಇನ್ನೂ ನಡೆಯುತ್ತಿರುವುದರಿಂದ ಮತ್ತು ಆಗಸ್ಟ್ 15ರ ಹೊತ್ತಿಗೆ ಮುಗಿಯುವುದು ಸಂಶಯವಿರುವುದರಿಂದ ಚಿತ್ರವನ್ನು ಎರಡ್ಮೂರು ವಾರ ಮುಂದಕ್ಕೆ ಹೋಗಲಿದೆ. ಸದ್ಯಕ್ಕೆ ಹೊಸ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಸಮಯ ನೋಡಿಕೊಂಡು ತಿಳಿಸುತ್ತೇವೆ’ ಎಂದು ಹೇಳಿದ್ದಾರೆ.

‘ಭೈರತಿ ರಣಗಲ್‍’ ಚಿತ್ರೀಕರಣ ಹಾಗೂ ಬೇರೆ ಕೆಲಸಗಳು ಮುಗಿದಿಲ್ಲ. ಈಗಾಗಲೇ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಮಧ್ಯೆ, ಶಿವರಾಜಕುಮಾರ್‍ ತಮ್ಮ ಪತ್ನಿ ಗೀತಾ ಶಿವರಾಜಕುಮಾರ್‍ ಅವರ ಚುನಾವಣಾ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಬೀಡುಬಿಟ್ಟಿದ್ದರಿಂದ, ಅವರ ಭಾಗದ ಚಿತ್ರೀಕರಣ ಮುಗಿದಿಲ್ಲ. ಹಾಗಾಗಿ, ಚಿತ್ರವನ್ನು ಮುಂದೂಡುವ ಯೋಚನೆಗೆ ಚಿತ್ರತಂಡ ಬಂದಿದೆ.

‘ಭೈರತಿ ರಣಗಲ್‍’ ಮುಂದಕ್ಕೆ ಹೋಗಿರುವುದರಿಂದ, ಕಣದಲ್ಲಿ ಎರಡು ಚಿತ್ರಗಳು ಮಾತ್ರ ಉಳಿದಿವೆ. ಸ್ವಾತಂತ್ರ್ಯದ ದಿನ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ‘ಗೌರಿ’ ಚಿತ್ರಗಳು ಮಾತ್ರ ಬಿಡುಗಡೆ ಆಗಲಿವೆ.

ಭೂಮಿಕಾ

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

34 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago