ಮನರಂಜನೆ

ಸ್ವಾತಂತ್ರ್ಯ ದಿನಕ್ಕಿಲ್ಲ ‘ಭೈರತಿ ರಣಗಲ್‍’; ಹೊಸ ದಿನಾಂಕ ಸದ್ಯದಲ್ಲೇ ಘೋಷಣೆ

ಶಿವರಾಜಕುಮಾರ್‍ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಭೈರತಿ ರಣಗಲ್‍’, ಸ್ವಾತಂತ್ರ್ಯ ದಿನದಂದು ಬಿಡುಗಡೆ ಆಗುವುದು ಸಂಶಯ ಎಂಬ ಮಾತು ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಆದರೆ, ಚಿತ್ರತಂಡದವರು ಮಾತ್ರ ಈ ಕುರಿತು ಯಾವುದೇ ಘೋಷಣೆ ಮಾಡಿರಲಿಲ್ಲ. ಈಗ ಚಿತ್ರ ಮುಂದಕ್ಕೆ ಹೋಗಿರುವ ವಿಷಯವನ್ನು ಸ್ವತಃ ಶಿವರಾಜಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ಭೈರತಿ ರಣಗಲ್‍’ ಚಿತ್ರವು ಆಗಸ್ಟ್ 15ರಂದು ಬಿಡಗುಡೆಯಾಗಲಿದೆ ಎಂದು ಚಿತ್ರತಂಡ ಕೆಲವು ತಿಂಗಳುಗಳ ಹಿಂದೆಯೇ ಘೋಷಿಸಿತ್ತು. ಆ ವಾರ ಲಾಂಗ್‍ ವೀಕೆಂಡ್‍ ಇರುವುದರಿಂದ ಮತ್ತು ಸತತವಾಗಿ ರಜೆಗಳು ಸಿಗುವ ಕಾರಣ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ಚಿತ್ರತಂಡಗಳು ಪೈಪೋಟಿ ನಡೆಸಿದ್ದವು. ಆಗಸ್ಟ್ 15ರ ಗುರುವಾರ ಸ್ವಾತಂತ್ರ್ಯ ದಿನಾಚರಣೆಯಾದರೆ, ಆಗಸ್ಟ್ 16ರ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವಿದೆ. ಇನ್ನು, ಶನಿವಾರ ಮತ್ತು ಭಾನುವಾರ ರಜೆಗಳಿವೆ.

ಹಾಗಾಗಿ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ನಿರೀಕ್ಷಿತ ಚಿತ್ರಗಳು ಪೈಪೋಟಿ ನಡೆಸಿದ್ದವು. ಅಂದು ರೋಹಿತ್‍ ಶೆಟ್ಟಿ ನಿರ್ದೇಶನದ, ಅಜಯ್‍ ದೇವಗನ್‍ ಅಭಿನಯದ ‘ಸಿಂಗಂ ಅಗೇನ್‍’, ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’ ಮತ್ತು ‘ಭೈರತಿ ರಣಗಲ್‍’ ಚಿತ್ರಗಳನ್ನು ಬಿಡುಗಡೆ ಮಾಡುವುದಾಗಿ ಆ ಚಿತ್ರತಂಡಗಳು ಘೋಷಿಸಿದ್ದವು.

ಆ ನಂತರ ‘ಸಿಂಗಂ ಅಗೇನ್‍’ ಅಂದುಕೊಂಡಂತೆಯೇ ಬಿಡುಗಡೆ ಆಗುವುದಿಲ್ಲ ಎಂದು ಹೇಳಲಾಯ್ತು. ಆ ನಂತರ ‘ಪುಷ್ಪ 2’ ಚಿತ್ರ ಸಹ ಡಿಸೆಂಬರ್‍ ಮೊದಲ ವಾರಕ್ಕೆ ಮುಂದೂಡಲಾಯ್ತು. ಈಗ ‘ಭೈರತಿ ರಣಗಲ್‍’ ಸಹ ಮುಂದಕ್ಕೆ ಹೋಗಿದೆಯಂತೆ.

ಈ ಕುರಿತು ಮಾತನಾಡಿರುವ ಶಿವರಾಜಕುಮಾರ್‍, ‘ಚಿತ್ರದ ಕೆಲಸಗಳು ಇನ್ನೂ ನಡೆಯುತ್ತಿರುವುದರಿಂದ ಮತ್ತು ಆಗಸ್ಟ್ 15ರ ಹೊತ್ತಿಗೆ ಮುಗಿಯುವುದು ಸಂಶಯವಿರುವುದರಿಂದ ಚಿತ್ರವನ್ನು ಎರಡ್ಮೂರು ವಾರ ಮುಂದಕ್ಕೆ ಹೋಗಲಿದೆ. ಸದ್ಯಕ್ಕೆ ಹೊಸ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಸಮಯ ನೋಡಿಕೊಂಡು ತಿಳಿಸುತ್ತೇವೆ’ ಎಂದು ಹೇಳಿದ್ದಾರೆ.

‘ಭೈರತಿ ರಣಗಲ್‍’ ಚಿತ್ರೀಕರಣ ಹಾಗೂ ಬೇರೆ ಕೆಲಸಗಳು ಮುಗಿದಿಲ್ಲ. ಈಗಾಗಲೇ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಮಧ್ಯೆ, ಶಿವರಾಜಕುಮಾರ್‍ ತಮ್ಮ ಪತ್ನಿ ಗೀತಾ ಶಿವರಾಜಕುಮಾರ್‍ ಅವರ ಚುನಾವಣಾ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಬೀಡುಬಿಟ್ಟಿದ್ದರಿಂದ, ಅವರ ಭಾಗದ ಚಿತ್ರೀಕರಣ ಮುಗಿದಿಲ್ಲ. ಹಾಗಾಗಿ, ಚಿತ್ರವನ್ನು ಮುಂದೂಡುವ ಯೋಚನೆಗೆ ಚಿತ್ರತಂಡ ಬಂದಿದೆ.

‘ಭೈರತಿ ರಣಗಲ್‍’ ಮುಂದಕ್ಕೆ ಹೋಗಿರುವುದರಿಂದ, ಕಣದಲ್ಲಿ ಎರಡು ಚಿತ್ರಗಳು ಮಾತ್ರ ಉಳಿದಿವೆ. ಸ್ವಾತಂತ್ರ್ಯದ ದಿನ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ‘ಗೌರಿ’ ಚಿತ್ರಗಳು ಮಾತ್ರ ಬಿಡುಗಡೆ ಆಗಲಿವೆ.

ಭೂಮಿಕಾ

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

6 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

8 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

8 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

8 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

9 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

10 hours ago