ಮನರಂಜನೆ

ಸ್ವಾತಂತ್ರ್ಯ ದಿನಕ್ಕಿಲ್ಲ ‘ಭೈರತಿ ರಣಗಲ್‍’; ಹೊಸ ದಿನಾಂಕ ಸದ್ಯದಲ್ಲೇ ಘೋಷಣೆ

ಶಿವರಾಜಕುಮಾರ್‍ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಭೈರತಿ ರಣಗಲ್‍’, ಸ್ವಾತಂತ್ರ್ಯ ದಿನದಂದು ಬಿಡುಗಡೆ ಆಗುವುದು ಸಂಶಯ ಎಂಬ ಮಾತು ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಆದರೆ, ಚಿತ್ರತಂಡದವರು ಮಾತ್ರ ಈ ಕುರಿತು ಯಾವುದೇ ಘೋಷಣೆ ಮಾಡಿರಲಿಲ್ಲ. ಈಗ ಚಿತ್ರ ಮುಂದಕ್ಕೆ ಹೋಗಿರುವ ವಿಷಯವನ್ನು ಸ್ವತಃ ಶಿವರಾಜಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ಭೈರತಿ ರಣಗಲ್‍’ ಚಿತ್ರವು ಆಗಸ್ಟ್ 15ರಂದು ಬಿಡಗುಡೆಯಾಗಲಿದೆ ಎಂದು ಚಿತ್ರತಂಡ ಕೆಲವು ತಿಂಗಳುಗಳ ಹಿಂದೆಯೇ ಘೋಷಿಸಿತ್ತು. ಆ ವಾರ ಲಾಂಗ್‍ ವೀಕೆಂಡ್‍ ಇರುವುದರಿಂದ ಮತ್ತು ಸತತವಾಗಿ ರಜೆಗಳು ಸಿಗುವ ಕಾರಣ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ಚಿತ್ರತಂಡಗಳು ಪೈಪೋಟಿ ನಡೆಸಿದ್ದವು. ಆಗಸ್ಟ್ 15ರ ಗುರುವಾರ ಸ್ವಾತಂತ್ರ್ಯ ದಿನಾಚರಣೆಯಾದರೆ, ಆಗಸ್ಟ್ 16ರ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವಿದೆ. ಇನ್ನು, ಶನಿವಾರ ಮತ್ತು ಭಾನುವಾರ ರಜೆಗಳಿವೆ.

ಹಾಗಾಗಿ, ಅಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಬರೀ ಕನ್ನಡವಷ್ಟೇ ಅಲ್ಲ, ಬೇರೆ ಭಾಷೆಗಳ ನಿರೀಕ್ಷಿತ ಚಿತ್ರಗಳು ಪೈಪೋಟಿ ನಡೆಸಿದ್ದವು. ಅಂದು ರೋಹಿತ್‍ ಶೆಟ್ಟಿ ನಿರ್ದೇಶನದ, ಅಜಯ್‍ ದೇವಗನ್‍ ಅಭಿನಯದ ‘ಸಿಂಗಂ ಅಗೇನ್‍’, ಅಲ್ಲು ಅರ್ಜುನ್‍ ಅಭಿನಯದ ಬಹುನಿರೀಕ್ಷೆಯ ಚಿತ್ರವಾದ ‘ಪುಷ್ಪ 2’ ಮತ್ತು ‘ಭೈರತಿ ರಣಗಲ್‍’ ಚಿತ್ರಗಳನ್ನು ಬಿಡುಗಡೆ ಮಾಡುವುದಾಗಿ ಆ ಚಿತ್ರತಂಡಗಳು ಘೋಷಿಸಿದ್ದವು.

ಆ ನಂತರ ‘ಸಿಂಗಂ ಅಗೇನ್‍’ ಅಂದುಕೊಂಡಂತೆಯೇ ಬಿಡುಗಡೆ ಆಗುವುದಿಲ್ಲ ಎಂದು ಹೇಳಲಾಯ್ತು. ಆ ನಂತರ ‘ಪುಷ್ಪ 2’ ಚಿತ್ರ ಸಹ ಡಿಸೆಂಬರ್‍ ಮೊದಲ ವಾರಕ್ಕೆ ಮುಂದೂಡಲಾಯ್ತು. ಈಗ ‘ಭೈರತಿ ರಣಗಲ್‍’ ಸಹ ಮುಂದಕ್ಕೆ ಹೋಗಿದೆಯಂತೆ.

ಈ ಕುರಿತು ಮಾತನಾಡಿರುವ ಶಿವರಾಜಕುಮಾರ್‍, ‘ಚಿತ್ರದ ಕೆಲಸಗಳು ಇನ್ನೂ ನಡೆಯುತ್ತಿರುವುದರಿಂದ ಮತ್ತು ಆಗಸ್ಟ್ 15ರ ಹೊತ್ತಿಗೆ ಮುಗಿಯುವುದು ಸಂಶಯವಿರುವುದರಿಂದ ಚಿತ್ರವನ್ನು ಎರಡ್ಮೂರು ವಾರ ಮುಂದಕ್ಕೆ ಹೋಗಲಿದೆ. ಸದ್ಯಕ್ಕೆ ಹೊಸ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಸಮಯ ನೋಡಿಕೊಂಡು ತಿಳಿಸುತ್ತೇವೆ’ ಎಂದು ಹೇಳಿದ್ದಾರೆ.

‘ಭೈರತಿ ರಣಗಲ್‍’ ಚಿತ್ರೀಕರಣ ಹಾಗೂ ಬೇರೆ ಕೆಲಸಗಳು ಮುಗಿದಿಲ್ಲ. ಈಗಾಗಲೇ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಮಧ್ಯೆ, ಶಿವರಾಜಕುಮಾರ್‍ ತಮ್ಮ ಪತ್ನಿ ಗೀತಾ ಶಿವರಾಜಕುಮಾರ್‍ ಅವರ ಚುನಾವಣಾ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಬೀಡುಬಿಟ್ಟಿದ್ದರಿಂದ, ಅವರ ಭಾಗದ ಚಿತ್ರೀಕರಣ ಮುಗಿದಿಲ್ಲ. ಹಾಗಾಗಿ, ಚಿತ್ರವನ್ನು ಮುಂದೂಡುವ ಯೋಚನೆಗೆ ಚಿತ್ರತಂಡ ಬಂದಿದೆ.

‘ಭೈರತಿ ರಣಗಲ್‍’ ಮುಂದಕ್ಕೆ ಹೋಗಿರುವುದರಿಂದ, ಕಣದಲ್ಲಿ ಎರಡು ಚಿತ್ರಗಳು ಮಾತ್ರ ಉಳಿದಿವೆ. ಸ್ವಾತಂತ್ರ್ಯದ ದಿನ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ಇಂದ್ರಜಿತ್‍ ಲಂಕೇಶ್‍ ನಿರ್ದೇಶನದ ‘ಗೌರಿ’ ಚಿತ್ರಗಳು ಮಾತ್ರ ಬಿಡುಗಡೆ ಆಗಲಿವೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago