ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರವು ಇದೇ ಗುರುವಾರ (ಆಗಸ್ಟ್ 15) ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ತಡವಾಗಿದ್ದರಿಂದ ಚಿತ್ರದ ಬಿಡುಗಡೆ ಸಹ ಮುಂದಕ್ಕೆ ಹೋಗಿದೆ. ಚಿತ್ರವು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಶೀರ್ಷಿಕೆ ಗೀತೆ ಬಿಡುಗಡೆ ಆಗಿದೆ.
ಹೌದು, ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆ ಆಗಿದೆ.
‘ಕೆಜಿಎಫ್’ ಖ್ಯಾತಿಯ ಕಿನ್ನಾಳ್ ರಾಜ್ ಬರೆದಿರುವ ‘ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು…’ ಎಂದು ಸಾಗುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆಗೆ ರವಿ ಬಸ್ರೂರು ಸಂಗೀತ ಸಂಯೋಜಿಸಿದರೆ, ಸಂತೋಷ್ ವೆಂಕಿ ಹಾಡಿದ್ದಾರೆ.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ನಲ್ಲಿ ಮೂಡಿಬಂದಿದ್ದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.
‘ಭೈರತಿ ರಣಗಲ್’ ಚಿತ್ರದಲ್ಲಿ ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಮಿಕ್ಕಂತೆ ಬಾಬು ಹಿರಣ್ಣಯ್ಯ, ರಾಹುಲ್ ಬೋಸ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನವಿದೆ.
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…
ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…