ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರವು ಇದೇ ಗುರುವಾರ (ಆಗಸ್ಟ್ 15) ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ತಡವಾಗಿದ್ದರಿಂದ ಚಿತ್ರದ ಬಿಡುಗಡೆ ಸಹ ಮುಂದಕ್ಕೆ ಹೋಗಿದೆ. ಚಿತ್ರವು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಶೀರ್ಷಿಕೆ ಗೀತೆ ಬಿಡುಗಡೆ ಆಗಿದೆ.
ಹೌದು, ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆ ಆಗಿದೆ.
‘ಕೆಜಿಎಫ್’ ಖ್ಯಾತಿಯ ಕಿನ್ನಾಳ್ ರಾಜ್ ಬರೆದಿರುವ ‘ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು…’ ಎಂದು ಸಾಗುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆಗೆ ರವಿ ಬಸ್ರೂರು ಸಂಗೀತ ಸಂಯೋಜಿಸಿದರೆ, ಸಂತೋಷ್ ವೆಂಕಿ ಹಾಡಿದ್ದಾರೆ.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ನಲ್ಲಿ ಮೂಡಿಬಂದಿದ್ದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.
‘ಭೈರತಿ ರಣಗಲ್’ ಚಿತ್ರದಲ್ಲಿ ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಮಿಕ್ಕಂತೆ ಬಾಬು ಹಿರಣ್ಣಯ್ಯ, ರಾಹುಲ್ ಬೋಸ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನವಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…