ಮನರಂಜನೆ

ಸೆಪ್ಟೆಂಬರ್‍ನಲ್ಲಿ ‘ಭೈರತಿ ರಣಗಲ್‍’; ಸದ್ಯದ ಶೀರ್ಷಿಕೆ ಗೀತೆ ಕೇಳಿ …

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಶಿವರಾಜಕುಮಾರ್‍ ಅಭಿನಯದ ‘ಭೈರತಿ ರಣಗಲ್’ ಚಿತ್ರವು ಇದೇ ಗುರುವಾರ (ಆಗಸ್ಟ್ 15) ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರೀಕರಣ ತಡವಾಗಿದ್ದರಿಂದ ಚಿತ್ರದ ಬಿಡುಗಡೆ ಸಹ ಮುಂದಕ್ಕೆ ಹೋಗಿದೆ. ಚಿತ್ರವು ಸೆಪ್ಟೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಶೀರ್ಷಿಕೆ ಗೀತೆ ಬಿಡುಗಡೆ ಆಗಿದೆ.

ಹೌದು, ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆ ಆನಂದ್ ಆಡಿಯೋ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಆಗಿದೆ.

‘ಕೆಜಿಎಫ್‍’ ಖ್ಯಾತಿಯ ಕಿನ್ನಾಳ್ ರಾಜ್ ಬರೆದಿರುವ ‘ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು…’ ಎಂದು ಸಾಗುವ ‘ಭೈರತಿ ರಣಗಲ್’ ಚಿತ್ರದ ಶೀರ್ಷಿಕೆ ಗೀತೆಗೆ ರವಿ ಬಸ್ರೂರು ಸಂಗೀತ ಸಂಯೋಜಿಸಿದರೆ, ಸಂತೋಷ್ ವೆಂಕಿ ಹಾಡಿದ್ದಾರೆ.

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್‍ನಲ್ಲಿ ಮೂಡಿಬಂದಿದ್ದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಈ ಚಿತ್ರದ ಟೀಸರ್‍ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.

‘ಭೈರತಿ ರಣಗಲ್‍’ ಚಿತ್ರದಲ್ಲಿ ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಮಿಕ್ಕಂತೆ ಬಾಬು ಹಿರಣ್ಣಯ್ಯ, ರಾಹುಲ್ ಬೋಸ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನವಿದೆ.

ಭೂಮಿಕಾ

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

2 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

2 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

2 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

2 hours ago