ಮನರಂಜನೆ

ವೀರಯೋಧನಾಗಿ ಶಿವಣ್ಣ ಎಂಟ್ರಿ; ‘ಭೈರವನ ಕೊನೆಯ ಪಾಠ’ ಫಸ್ಟ್ ಲುಕ್ ಅನಾವರಣ

ಶಿವರಾಜಕುಮಾರ್‍ ಇದೇ ಶುಕ್ರವಾರ (ಜುಲೈ 12) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ‘ಭೈರವನ ಕೊನೆಯ ಪಾಠ’ ಚಿತ್ರದ ಮೊದಲ ನೋಟ ಬಿಡುಗಡೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಚಿತ್ರಂಡ, ಹುಟ್ಟುಹಬ್ಬದವರೆಗೂ ಕಾಯಲಿಲ್ಲ. ಅಂದು ಶಿವಣ್ಣ ಅಭಿನಯದ ಬೇರೆ ಚಿತ್ರಗಳ ಟೀಸರ್‍, ಪೋಸ್ಟರ್ ಬಿಡುಗಡೆ ಆಗುವ ಸಾಧ್ಯತೆ ಇರುವುದರಿಂದ ಮತ್ತು ಅದರ ಮಧ್ಯೆ ತಮ್ಮ ಚಿತ್ರವು ಕಳೆದು ಹೋಗಬಾರದೆಂಬ ದೃಷ್ಟಿಯಿಂದ, ಬಿಡುಗಡೆಗೂ ಮೊದಲೇ ‘ಭೈರವನ ಕೊನೆಯ ಪಾಠ’ ಚಿತ್ರದ ಮೊದಲ ನೋಟ ಬಿಡುಗಡೆ ಮಾಡಿದೆ.

ಹೌದು, ಹೇಮಂತ್‍ ರಾವ್‍ ನಿರ್ದೇಶನದ ಮತ್ತು ವೈಶಾಖ್‍ ಜೆ ಗೌಡ ನಿರ್ಮಾಣದ ‘ಭೈರವನ ಕೊನೆಯ ಪಾಠ’ ಚಿತ್ರದ ಪೋಸ್ಟರ್‍ ಬಿಡುಗಡೆಯಾಗಿ ಸಾಕಷ್ಟು ಸುದ್ದಿ ಮಾಡುತ್ತಿದೆ. ಕಾರಣ, ಈ ಚಿತ್ರದಲ್ಲಿ ಶಿವಣ್ಣ ವೀರಯೋಧನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಎರಡು ಪೋಸ್ಟರ್‍ಗಳು ಬಿಡುಗಡೆಯಾಗಿದ್‍ದು, ಎರಡು ಲುಕ್‍ಗಳಲ್ಲಿ ಶಿವರಾಜಕುಮಾರ್ ಕಾಣಿಸಿಕೊಂಡಿದ್ದಾರೆ. ಗಡ್ಡ ಹಾಗೂ ಮೀಸೆ ಬೆಳ್ಳಗಾಗಿದೆ. ಯುದ್ದದ ಪೋಷಾಕು ತೊಟ್ಟು, ಬೆನ್ನಿಗೆ ಬಾಣಗಳನ್ನು ಕಟ್ಟಿಕೊಂಡು ಯುದ್ಧಕ್ಕೆ ಸಜ್ಜಾಗಿದ್ದಾರೆ. ಪೋಸ್ಟರ್ ನಲ್ಲಿ ಹಂಪಿಯ ಕಮಲ ಮಹಲ್ ಕೂಡ ಇರುವುದು ಸಿನಿಮಾ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಈ ಚಿತ್ರದ ಕುರಿತು ಮಾತನಾಡುವ ಶಿವಣ್ಣ, ‘ಅಪ್ಪಾಜಿ, ಈ ರೀತಿಯ ಪಾತ್ರಗಳನ್ನು ನಿಭಾಯಿಸುವುದರಲ್ಲಿ ಹೆಸರುವಾಸಿಯಾಗಿದ್ದರು. ಈಗ ನನಗೆ ಅಂಥದ್ದೊಂದು ಅವಕಾಶ ಸಿಕ್ಕಿದೆ. ಭೈರವನ ಪಾತ್ರದಲ್ಲಿ ನಟಿಸುತ್ತಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಹೇಮಂತ್ ಎಂ ರಾವ್ ಮತ್ತು ತಂಡದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಹೇಮಂತ್ ಎಂ ರಾವ್‍ ಅವರಿಗೆ ‘ಭೈರವನ ಕೊನೆಯ ಪಾಠ’ ಮಹತ್ವಾಕಾಂಕ್ಷೆಯ ಚಿತ್ರವಾಗಿದೆಯಂತೆ. ‘ಇದೇ ಮೊದಲ ಬಾರಿಗೆ ಸೂಪರ್‌ಸ್ಟಾರ್ ಸಿನಿಮಾವನ್ನು ನಿರ್ದೇಶಿಸುವ ಜವಾಬ್ದಾರಿಯು ಸವಾಲಿನ ಕೆಲಸವಾಗಿದೆ. ಶಿವಣ್ಣ ಜೊತೆ ಕೆಲಸ ಮಾಡುವುದು ಪ್ರತಿಯೊಬ್ಬ ನಿರ್ದೇಶಕರ ಆಸೆ. ಇಡೀ ದಿನ ಬೆಟ್ಟದ ಮೇಲೆ ಫೋಟೋಶೂಟ್ ನಡೆದಿದೆ. ಇದು ಕೆಲವು ಶತಮಾನಗಳ ಹಿಂದಿನ ಸಿನಿಮಾ’ ಎಂದಷ್ಟೇ ಹೇಳಿದ್ದು, ಚಿತ್ರಕ್ಕೆ ಸಂಬಂಧಿಸಿದ ಮಿಕ್ಕ ವಿಷಯಗಳನ್ನು ಗೌಪ್ಯವಾಗಿಟ್ಟಿದ್ದಾರೆ.

‘ಭೈರವನ ಕೊನೆ ಪಾಠ’ ಚಿತ್ರವನ್ನು ವೈಶಾಖ್‍ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಡಾ. ವೈಶಾಖ್‍ ಜೆ ಗೌಡ ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

44 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

45 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

1 hour ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

2 hours ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

2 hours ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

2 hours ago