ಮನರಂಜನೆ

ಮಲಯಾಳಂಗೆ ಹೊರಟ ಭರತ್‍ ಬೋಪಣ್ಣ; ‘ಬ್ರೊಮ್ಯಾನ್ಸ್’ನಲ್ಲಿ ವಿಲನ್

ಅರುಣ್‍ ವಿಜಯ್‍ ಅಭಿನಯದ ‘ಮಿಷನ್‍: ಚಾಪ್ಟರ್ 1’ ಚಿತ್ರದಲ್ಲಿ ನಟಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಹೋಗಿದ್ದ ಕನ್ನಡಿಗ ಭರತ್‍ ಬೋಪಣ್ಣ, ಇದೀಗ ಮಲಯಾಳಂ ಚಿತ್ರರಂಗಕ್ಕೆ ಹೊರಟಿದ್ದಾರೆ. ಭರತ್‍ ಅಭಿನಯದ ಮೊದಲ ಚಿತ್ರ ‘ಬ್ರೊಮ್ಯಾನ್ಸ್’ ಮುಹೂರ್ತ ಇತ್ತೀಚೆಗಷ್ಟೇ ಮುಗಿದಿದೆ.

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಡೆಮೋ ಪೀಸ್‍’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು ಭರತ್. ನಂತರ, ವಿಜಯ್ ಸಂಕೇಶ್ವರ್ ಅವರ ಜೀನವನ್ನಾಧರಿಸಿದ ‘ವಿಜಯಾನಂದ್’ ಚಿತ್ರದಲ್ಲಿ ಅವರ ಮಗ ಆನಂದ್‍ ಸಂಕೇಶ್ವರ್ ಪಾತ್ರ ಮಾಡಿದ್ದರು. ಆ ನಂತರ ಭರತ್‍ ಇನ್ನೊಂದೆರಡು ಕನ್ನಡ ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ತಮಿಳಿಗೂ ಹೋಗಿದ್ದರು. ಅಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಭರತ್‍, ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅರ್ಜುನ್‍ ಅಶೋಕನ್‍, ಮ್ಯಾಥ್ಯೂ ಥಾಮಸ್‍ ಮತ್ತು ಮಹಿಮಾ ನಂಬಿಯಾರ್ ನಟಿಸುತ್ತಿರುವ ‘ಬ್ರೊಮ್ಯಾನ್ಸ್’ ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ‘ಜೋ ಆ್ಯಂಡ್‍ ಜೋ’ ಮತ್ತು ‘18+’ ಚಿತ್ರಗಳನ್ನು ನಿರ್ದೇಶಿಸಿದ್ದ ಅರ್ಜುನ್‍ ಡಿ ಜೋಸ್ ಈ ಚಿತ್ರದ ನಿರ್ದೇಶಕರು. ಈ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ಆಗಿದ್ದು, ಚಿತ್ರತಂಡದವರು ಸೋಷಿಯಲ್‍ ಮೀಡಿಯಾ ಮೂಲಕ ಮುಹೂರ್ತದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಬ್ರೊಮ್ಯಾನ್ಸ್’ ಒಂದು ಫ್ಯಾಮಿಲಿ ಚಿತ್ರವಾಗಿದ್ದು, ಇತ್ತೀಚೆಗೆ ವಿಶು ಹಬ್ಬದ ಸಂದರ್ಭದಲ್ಲಿ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿತ್ತು. ಅಂದಹಾಗೆ, ಚಿತ್ರದ ಕಥೆಯೇನು ಮತ್ತು ಚಿತ್ರದಲ್ಲಿ ಭರತ್ ಪಾತ್ರವೇನು ಎಂಬ ವಿಷಯವನ್ನು ಗೌಪ್ಯವಾಗಿಡಲಾಗಿದೆ.

ಭೂಮಿಕಾ

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

8 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

26 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

49 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago