ಮನರಂಜನೆ

ಮಲಯಾಳಂಗೆ ಹೊರಟ ಭರತ್‍ ಬೋಪಣ್ಣ; ‘ಬ್ರೊಮ್ಯಾನ್ಸ್’ನಲ್ಲಿ ವಿಲನ್

ಅರುಣ್‍ ವಿಜಯ್‍ ಅಭಿನಯದ ‘ಮಿಷನ್‍: ಚಾಪ್ಟರ್ 1’ ಚಿತ್ರದಲ್ಲಿ ನಟಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಹೋಗಿದ್ದ ಕನ್ನಡಿಗ ಭರತ್‍ ಬೋಪಣ್ಣ, ಇದೀಗ ಮಲಯಾಳಂ ಚಿತ್ರರಂಗಕ್ಕೆ ಹೊರಟಿದ್ದಾರೆ. ಭರತ್‍ ಅಭಿನಯದ ಮೊದಲ ಚಿತ್ರ ‘ಬ್ರೊಮ್ಯಾನ್ಸ್’ ಮುಹೂರ್ತ ಇತ್ತೀಚೆಗಷ್ಟೇ ಮುಗಿದಿದೆ.

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಡೆಮೋ ಪೀಸ್‍’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು ಭರತ್. ನಂತರ, ವಿಜಯ್ ಸಂಕೇಶ್ವರ್ ಅವರ ಜೀನವನ್ನಾಧರಿಸಿದ ‘ವಿಜಯಾನಂದ್’ ಚಿತ್ರದಲ್ಲಿ ಅವರ ಮಗ ಆನಂದ್‍ ಸಂಕೇಶ್ವರ್ ಪಾತ್ರ ಮಾಡಿದ್ದರು. ಆ ನಂತರ ಭರತ್‍ ಇನ್ನೊಂದೆರಡು ಕನ್ನಡ ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ತಮಿಳಿಗೂ ಹೋಗಿದ್ದರು. ಅಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಭರತ್‍, ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅರ್ಜುನ್‍ ಅಶೋಕನ್‍, ಮ್ಯಾಥ್ಯೂ ಥಾಮಸ್‍ ಮತ್ತು ಮಹಿಮಾ ನಂಬಿಯಾರ್ ನಟಿಸುತ್ತಿರುವ ‘ಬ್ರೊಮ್ಯಾನ್ಸ್’ ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ‘ಜೋ ಆ್ಯಂಡ್‍ ಜೋ’ ಮತ್ತು ‘18+’ ಚಿತ್ರಗಳನ್ನು ನಿರ್ದೇಶಿಸಿದ್ದ ಅರ್ಜುನ್‍ ಡಿ ಜೋಸ್ ಈ ಚಿತ್ರದ ನಿರ್ದೇಶಕರು. ಈ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ಆಗಿದ್ದು, ಚಿತ್ರತಂಡದವರು ಸೋಷಿಯಲ್‍ ಮೀಡಿಯಾ ಮೂಲಕ ಮುಹೂರ್ತದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಬ್ರೊಮ್ಯಾನ್ಸ್’ ಒಂದು ಫ್ಯಾಮಿಲಿ ಚಿತ್ರವಾಗಿದ್ದು, ಇತ್ತೀಚೆಗೆ ವಿಶು ಹಬ್ಬದ ಸಂದರ್ಭದಲ್ಲಿ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿತ್ತು. ಅಂದಹಾಗೆ, ಚಿತ್ರದ ಕಥೆಯೇನು ಮತ್ತು ಚಿತ್ರದಲ್ಲಿ ಭರತ್ ಪಾತ್ರವೇನು ಎಂಬ ವಿಷಯವನ್ನು ಗೌಪ್ಯವಾಗಿಡಲಾಗಿದೆ.

ಭೂಮಿಕಾ

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

12 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

13 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

17 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago