ಮನರಂಜನೆ

ಮಲಯಾಳಂಗೆ ಹೊರಟ ಭರತ್‍ ಬೋಪಣ್ಣ; ‘ಬ್ರೊಮ್ಯಾನ್ಸ್’ನಲ್ಲಿ ವಿಲನ್

ಅರುಣ್‍ ವಿಜಯ್‍ ಅಭಿನಯದ ‘ಮಿಷನ್‍: ಚಾಪ್ಟರ್ 1’ ಚಿತ್ರದಲ್ಲಿ ನಟಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಹೋಗಿದ್ದ ಕನ್ನಡಿಗ ಭರತ್‍ ಬೋಪಣ್ಣ, ಇದೀಗ ಮಲಯಾಳಂ ಚಿತ್ರರಂಗಕ್ಕೆ ಹೊರಟಿದ್ದಾರೆ. ಭರತ್‍ ಅಭಿನಯದ ಮೊದಲ ಚಿತ್ರ ‘ಬ್ರೊಮ್ಯಾನ್ಸ್’ ಮುಹೂರ್ತ ಇತ್ತೀಚೆಗಷ್ಟೇ ಮುಗಿದಿದೆ.

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಡೆಮೋ ಪೀಸ್‍’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು ಭರತ್. ನಂತರ, ವಿಜಯ್ ಸಂಕೇಶ್ವರ್ ಅವರ ಜೀನವನ್ನಾಧರಿಸಿದ ‘ವಿಜಯಾನಂದ್’ ಚಿತ್ರದಲ್ಲಿ ಅವರ ಮಗ ಆನಂದ್‍ ಸಂಕೇಶ್ವರ್ ಪಾತ್ರ ಮಾಡಿದ್ದರು. ಆ ನಂತರ ಭರತ್‍ ಇನ್ನೊಂದೆರಡು ಕನ್ನಡ ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ತಮಿಳಿಗೂ ಹೋಗಿದ್ದರು. ಅಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ಭರತ್‍, ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅರ್ಜುನ್‍ ಅಶೋಕನ್‍, ಮ್ಯಾಥ್ಯೂ ಥಾಮಸ್‍ ಮತ್ತು ಮಹಿಮಾ ನಂಬಿಯಾರ್ ನಟಿಸುತ್ತಿರುವ ‘ಬ್ರೊಮ್ಯಾನ್ಸ್’ ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ‘ಜೋ ಆ್ಯಂಡ್‍ ಜೋ’ ಮತ್ತು ‘18+’ ಚಿತ್ರಗಳನ್ನು ನಿರ್ದೇಶಿಸಿದ್ದ ಅರ್ಜುನ್‍ ಡಿ ಜೋಸ್ ಈ ಚಿತ್ರದ ನಿರ್ದೇಶಕರು. ಈ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ಆಗಿದ್ದು, ಚಿತ್ರತಂಡದವರು ಸೋಷಿಯಲ್‍ ಮೀಡಿಯಾ ಮೂಲಕ ಮುಹೂರ್ತದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಬ್ರೊಮ್ಯಾನ್ಸ್’ ಒಂದು ಫ್ಯಾಮಿಲಿ ಚಿತ್ರವಾಗಿದ್ದು, ಇತ್ತೀಚೆಗೆ ವಿಶು ಹಬ್ಬದ ಸಂದರ್ಭದಲ್ಲಿ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿತ್ತು. ಅಂದಹಾಗೆ, ಚಿತ್ರದ ಕಥೆಯೇನು ಮತ್ತು ಚಿತ್ರದಲ್ಲಿ ಭರತ್ ಪಾತ್ರವೇನು ಎಂಬ ವಿಷಯವನ್ನು ಗೌಪ್ಯವಾಗಿಡಲಾಗಿದೆ.

ಭೂಮಿಕಾ

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

4 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

6 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago