ಮನರಂಜನೆ

ಜನ ಬಾರದೆ ಮುಚ್ಚಿದ್ದ 18 ಚಿತ್ರಮಂದಿರಗಳ ಬೀಗ ತೆಗೆಸಿದ ‘ಭೀಮ’

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಆಗಸ್ಟ್ 09ಕ್ಕೆ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಹೊಸ ವಿಷಯವೆಂದರೆ, ಈ ಚಿತ್ರದಿಂದಾಗಿ ಬಂದ್‍ ಆಗಿರುವ 18 ಚಿತ್ರಮಂದಿರಗಳನ್ನು ಪುನಃ ಪ್ರಾರಂಭಿಸಲಾಗುತ್ತಿದೆ.

‘ಭೀಮ’ ಚಿತ್ರದ ಚಿತ್ರೀಕರಣ ಮತ್ತು ಬೇರೆ ಕೆಲಸಗಳು ಮುಗಿದು ಕೆಲವು ತಿಂಗಳುಗಳೇ ಆದರೂ, ಚಿತ್ರತಂಡ ಅದ್ಯಾಕೋ ಚಿತ್ರ ಬಿಡುಗಡೆ ಮಾಡುವ ಮನಸ್ಸು ಮಾಡಿರಲಿಲ್ಲ. ಚಿತ್ರದ ಬ್ಯುಸಿನೆಸ್ ಆಗದಿರುವ ಕಾರಣ, ಚಿತ್ರದ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಲೇ ಇತ್ತು. ಈಗ ಚಿತ್ರತಂಡದವರು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಚಿತ್ರದ ಕುರಿತು ಮಾತನಾಡಿರುವ ನಿರ್ಮಾಪಕ ಜಗದೀಶ್‍ ಗೌಡ, ‘ಕಳೆದ ಕೆಲವು ತಿಂಗಳುಗಳಲ್ಲಿ ಮುಚ್ಚಿಹೋಗಿದ್ದ 18 ಚಿತ್ರಮಂದಿರಗಳು, ಈ ಚಿತ್ರದಿಂದ ಪ್ರಾರಂಭವಾಗುತ್ತಿವೆ. ಬಿ.ಕೆ.ಟಿ ಬಿಟ್ಟು ಮಿಕ್ಕೆಲ್ಲಾ ಪ್ರದೇಶಗಳ ವಿತರಣೆ ಹಕ್ಕುಗಳನ್ನು ಕೊಟ್ಟಿದ್ದೇವೆ. 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳು ಮತ್ತು ಹೊರದೇಶಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೆ.ಆರ್.ಜಿ. ಸ್ಟುಡಿಯೋಸ್‍ ಸಹಾಯ ಮಾಡುತ್ತಿವೆ’ ಎಂದರು.

‘ದುನಿಯಾ’ ವಿಜಯ್‍ ನಿರ್ದೇಶಿಸುತ್ತಿರುವ ಎರಡನೆಯ ಕಥೆ ಇದು. ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಡ್ರಗ್ಸ್ ದಂಧೆಯ ಕುರಿತಾದ ಈ ಚಿತ್ರವನ್ನು ನೋಡಿರುವ ಸೆನ್ಸಾರ್‍ ಮಂಡಳಿಯು ‘ಎ’ ಪ್ರಮಾಣಪತ್ರ ನೀಡಿದೆ. ಈ ಚಿತ್ರಕ್ಕೆ ‘ದುನಿಯಾ’ ವಿಜಯ್‍ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದು, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ಅಶ್ವಿನಿ, ರಂಗಾಯಣ ರಘು, ಅಚ್ಯುತ್‍ ಕುಮಾರ್‍, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ.

‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜೊತೆಯಾಗಿ ನಿರ್ಮಿಸಿದ್ದು, ಚರಣ್ರಾಜ್ ಸಂಗೀತ ಮತ್ತು ಶಿವಸೇನ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

8 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

8 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

8 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago