ಮನರಂಜನೆ

ಜನ ಬಾರದೆ ಮುಚ್ಚಿದ್ದ 18 ಚಿತ್ರಮಂದಿರಗಳ ಬೀಗ ತೆಗೆಸಿದ ‘ಭೀಮ’

‘ದುನಿಯಾ’ ವಿಜಯ್‍ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಆಗಸ್ಟ್ 09ಕ್ಕೆ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಹೊಸ ವಿಷಯವೆಂದರೆ, ಈ ಚಿತ್ರದಿಂದಾಗಿ ಬಂದ್‍ ಆಗಿರುವ 18 ಚಿತ್ರಮಂದಿರಗಳನ್ನು ಪುನಃ ಪ್ರಾರಂಭಿಸಲಾಗುತ್ತಿದೆ.

‘ಭೀಮ’ ಚಿತ್ರದ ಚಿತ್ರೀಕರಣ ಮತ್ತು ಬೇರೆ ಕೆಲಸಗಳು ಮುಗಿದು ಕೆಲವು ತಿಂಗಳುಗಳೇ ಆದರೂ, ಚಿತ್ರತಂಡ ಅದ್ಯಾಕೋ ಚಿತ್ರ ಬಿಡುಗಡೆ ಮಾಡುವ ಮನಸ್ಸು ಮಾಡಿರಲಿಲ್ಲ. ಚಿತ್ರದ ಬ್ಯುಸಿನೆಸ್ ಆಗದಿರುವ ಕಾರಣ, ಚಿತ್ರದ ಬಿಡುಗಡೆಯನ್ನು ಮುಂದೂಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಲೇ ಇತ್ತು. ಈಗ ಚಿತ್ರತಂಡದವರು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಚಿತ್ರದ ಕುರಿತು ಮಾತನಾಡಿರುವ ನಿರ್ಮಾಪಕ ಜಗದೀಶ್‍ ಗೌಡ, ‘ಕಳೆದ ಕೆಲವು ತಿಂಗಳುಗಳಲ್ಲಿ ಮುಚ್ಚಿಹೋಗಿದ್ದ 18 ಚಿತ್ರಮಂದಿರಗಳು, ಈ ಚಿತ್ರದಿಂದ ಪ್ರಾರಂಭವಾಗುತ್ತಿವೆ. ಬಿ.ಕೆ.ಟಿ ಬಿಟ್ಟು ಮಿಕ್ಕೆಲ್ಲಾ ಪ್ರದೇಶಗಳ ವಿತರಣೆ ಹಕ್ಕುಗಳನ್ನು ಕೊಟ್ಟಿದ್ದೇವೆ. 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳು ಮತ್ತು ಹೊರದೇಶಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೆ.ಆರ್.ಜಿ. ಸ್ಟುಡಿಯೋಸ್‍ ಸಹಾಯ ಮಾಡುತ್ತಿವೆ’ ಎಂದರು.

‘ದುನಿಯಾ’ ವಿಜಯ್‍ ನಿರ್ದೇಶಿಸುತ್ತಿರುವ ಎರಡನೆಯ ಕಥೆ ಇದು. ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಡ್ರಗ್ಸ್ ದಂಧೆಯ ಕುರಿತಾದ ಈ ಚಿತ್ರವನ್ನು ನೋಡಿರುವ ಸೆನ್ಸಾರ್‍ ಮಂಡಳಿಯು ‘ಎ’ ಪ್ರಮಾಣಪತ್ರ ನೀಡಿದೆ. ಈ ಚಿತ್ರಕ್ಕೆ ‘ದುನಿಯಾ’ ವಿಜಯ್‍ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದು, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ಅಶ್ವಿನಿ, ರಂಗಾಯಣ ರಘು, ಅಚ್ಯುತ್‍ ಕುಮಾರ್‍, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ.

‘ಭೀಮ’ ಚಿತ್ರವನ್ನು ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಜೊತೆಯಾಗಿ ನಿರ್ಮಿಸಿದ್ದು, ಚರಣ್ರಾಜ್ ಸಂಗೀತ ಮತ್ತು ಶಿವಸೇನ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

8 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

8 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

9 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

9 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

14 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

14 hours ago