ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್-12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು, ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಕಳೆದ ವಾರದ ಎಪಿಸೋಡ್ನಲ್ಲಿ ಜಾಹ್ನವಿ ಹಾಗೂ ಅಶ್ವಿನಿ ಗೌಡ ಕೂತು ರಕ್ಷಿತಾ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ರಕ್ಷಿತಾರನ್ನು ಸ್ಲಮ್ ಎಂದು ಅಶ್ವಿನಿ ಗೌಡ ಕರೆದಿದ್ದರು. ಬಳಿಕ ಎಸ್ ಪದ ಬಳಕೆ ಮಾಡಿದ್ದರು. ಇದೇ ವಿಚಾರವಾಗಿ ಇದೀಗ ಪೊಲೀಸ್ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.
ಬಿಡದಿ ಪೊಲೀಸ್ ಠಾಣೆಯಲ್ಲಿ ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಿಂದ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ಗೆ ಬಿಗ್ ರಿಲೀಫ್
ಬಿಗ್ಬಾಸ್ ಮನೆಯಲ್ಲಿ ಸಹಸ್ಪರ್ಧಿ ಬಗ್ಗೆ ಅಶ್ವಿನಿ ಗೌಡ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ದೂರು ನೀಡಿದ್ದಾರೆ. ಇದು ವ್ಯಕ್ತಿ ನಿಂದನೆ ಎಂದು ಆರೋಪಿಸಿರುವ ಅವರು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ಶೋ ಆಯೋಜಕರ ವಿರುದ್ಧವೂ ದೂರು ನೀಡಿದ್ದಾರೆ.
ಸಮಾಜದಲ್ಲಿ ಎಲ್ಲರೂ ಒಂದೇ, ಯಾವುದೇ ಜಾತಿ ಭೇದ ಹರಡಬಾರದು. ಅಶ್ವಿನಿ ಗೌಡ ಮಾತನ್ನು ತೆಗೆಯದೇ ಕಾರ್ಯಕ್ರಮ ಪ್ರಸಾರ ಮಾಡಿದ್ದು ತಪ್ಪು. ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಕೀಲರು ನೀಡಿದ ದೂರು ಆಧರಿಸಿ ಬಿಡದಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ಎಸ್ ಪದದ ವಿವಾದ
ರಕ್ಷಿತಾ ಶೆಟ್ಟಿ ಬಗ್ಗೆ ‘ಸ್ಲಮ್’ ಎಂದು ಅಶ್ವಿನಿ ಗೌಡ ಹೇಳಿದ್ದನ್ನು ಮ್ಯೂಟ್ ಮಾಡಲಾಗಿತ್ತು. ಆದರೆ ಆಕೆಯ ಪದ ಬಳಕೆ ವೀಕ್ಷಕರಿಗೆ ಅರ್ಥವಾಗಿತ್ತು. ಅಷ್ಟೇ ಅಲ್ಲ, ಮತ್ತೆ ಇದೇ ವಿಚಾರವಾಗಿ ಜಾಹ್ನವಿ ಬಳಿಕ ಮಾತನಾಡುತ್ತಾ ‘ಎಸ್’ ಅಂತ ಹೇಳ್ದೆ ಅಲ್ವಾ ಎಂದು ಅಶ್ವಿನಿ ಮತ್ತೆ ಅದೇ ಅರ್ಥದಲ್ಲಿ ಮಾತನಾಡಿದ್ದರು. ಜಿಯೋ ಹಾಟ್ಸ್ಟರ್ನಲ್ಲಿ ಇದು ಸ್ಟ್ರೀಮಿಂಗ್ ಆಗಿತ್ತು. ಬಳಿಕ ಅದನ್ನು ಎಡಿಟ್ ಮಾಡಿ ಅಪ್ಲೋಡ್ ಮಾಡಿದ್ದರು. ಆದರೂ ವೀಕ್ಷಕರು ಅದನ್ನು ಗಮನಿಸಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಸಿದ್ದರು.
ಅದೇ ದಿನ ರಾತ್ರಿ 11 ಗಂಟೆಗೆ ಮತ್ತೆ ಅಶ್ವಿನಿ ಹಾಗೂ ಜಾಹ್ನವಿ ಇಬ್ಬರೂ ಮಾತನಾಡುವ ವೇಳೆ “ಅವಳಿಗೆ ಫುಲ್ ಶೇಪ್ ಔಟ್ ಆಗೋಯ್ತು. ಏನು ಮಾತನಾಡಲಿಲ್ಲ ಇವತ್ತು. ನಾನು ಹೇಳಲಿಲ್ವಾ ಆ S.. ಎಂದು ಅಶ್ವಿನಿ ಮತ್ತೆ ಹೇಳಿದ್ದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…