ಮನರಂಜನೆ

Biggboss 12 : ʻಎಸ್‌ʼ ಪದ ಬಳಕೆ, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು..

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್-12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು, ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಕಳೆದ ವಾರದ ಎಪಿಸೋಡ್‌ನಲ್ಲಿ ಜಾಹ್ನವಿ ಹಾಗೂ ಅಶ್ವಿನಿ ಗೌಡ ಕೂತು ರಕ್ಷಿತಾ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ರಕ್ಷಿತಾರನ್ನು ಸ್ಲಮ್ ಎಂದು ಅಶ್ವಿನಿ ಗೌಡ ಕರೆದಿದ್ದರು. ಬಳಿಕ ಎಸ್ ಪದ ಬಳಕೆ ಮಾಡಿದ್ದರು. ಇದೇ ವಿಚಾರವಾಗಿ ಇದೀಗ ಪೊಲೀಸ್ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಬಿಡದಿ ಪೊಲೀಸ್ ಠಾಣೆಯಲ್ಲಿ ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಿಂದ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ಗೆ ಬಿಗ್‌ ರಿಲೀಫ್‌

ಬಿಗ್‌ಬಾಸ್ ಮನೆಯಲ್ಲಿ ಸಹಸ್ಪರ್ಧಿ ಬಗ್ಗೆ ಅಶ್ವಿನಿ ಗೌಡ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ದೂರು ನೀಡಿದ್ದಾರೆ. ಇದು ವ್ಯಕ್ತಿ ನಿಂದನೆ ಎಂದು ಆರೋಪಿಸಿರುವ ಅವರು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ಶೋ ಆಯೋಜಕರ ವಿರುದ್ಧವೂ ದೂರು ನೀಡಿದ್ದಾರೆ.

ಸಮಾಜದಲ್ಲಿ ಎಲ್ಲರೂ ಒಂದೇ, ಯಾವುದೇ ಜಾತಿ ಭೇದ ಹರಡಬಾರದು. ಅಶ್ವಿನಿ ಗೌಡ ಮಾತನ್ನು ತೆಗೆಯದೇ ಕಾರ್ಯಕ್ರಮ ಪ್ರಸಾರ ಮಾಡಿದ್ದು ತಪ್ಪು. ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಕೀಲರು ನೀಡಿದ ದೂರು ಆಧರಿಸಿ ಬಿಡದಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.

ಎಸ್ ಪದದ ವಿವಾದ
ರಕ್ಷಿತಾ ಶೆಟ್ಟಿ ಬಗ್ಗೆ ‘ಸ್ಲಮ್’ ಎಂದು ಅಶ್ವಿನಿ ಗೌಡ ಹೇಳಿದ್ದನ್ನು ಮ್ಯೂಟ್ ಮಾಡಲಾಗಿತ್ತು. ಆದರೆ ಆಕೆಯ ಪದ ಬಳಕೆ ವೀಕ್ಷಕರಿಗೆ ಅರ್ಥವಾಗಿತ್ತು. ಅಷ್ಟೇ ಅಲ್ಲ, ಮತ್ತೆ ಇದೇ ವಿಚಾರವಾಗಿ ಜಾಹ್ನವಿ ಬಳಿಕ ಮಾತನಾಡುತ್ತಾ ‘ಎಸ್‌’ ಅಂತ ಹೇಳ್ದೆ ಅಲ್ವಾ ಎಂದು ಅಶ್ವಿನಿ ಮತ್ತೆ ಅದೇ ಅರ್ಥದಲ್ಲಿ ಮಾತನಾಡಿದ್ದರು. ಜಿಯೋ ಹಾಟ್‌ಸ್ಟರ್‌ನಲ್ಲಿ ಇದು ಸ್ಟ್ರೀಮಿಂಗ್ ಆಗಿತ್ತು. ಬಳಿಕ ಅದನ್ನು ಎಡಿಟ್ ಮಾಡಿ ಅಪ್‌ಲೋಡ್ ಮಾಡಿದ್ದರು. ಆದರೂ ವೀಕ್ಷಕರು ಅದನ್ನು ಗಮನಿಸಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಸಿದ್ದರು.

ಅದೇ ದಿನ ರಾತ್ರಿ 11 ಗಂಟೆಗೆ ಮತ್ತೆ ಅಶ್ವಿನಿ ಹಾಗೂ ಜಾಹ್ನವಿ ಇಬ್ಬರೂ ಮಾತನಾಡುವ ವೇಳೆ “ಅವಳಿಗೆ ಫುಲ್ ಶೇಪ್‌ ಔಟ್ ಆಗೋಯ್ತು. ಏನು ಮಾತನಾಡಲಿಲ್ಲ ಇವತ್ತು. ನಾನು ಹೇಳಲಿಲ್ವಾ ಆ S.. ಎಂದು ಅಶ್ವಿನಿ ಮತ್ತೆ ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago