ಮನರಂಜನೆ

Biggboss 12 : ʻಎಸ್‌ʼ ಪದ ಬಳಕೆ, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು..

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್-12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು, ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಕಳೆದ ವಾರದ ಎಪಿಸೋಡ್‌ನಲ್ಲಿ ಜಾಹ್ನವಿ ಹಾಗೂ ಅಶ್ವಿನಿ ಗೌಡ ಕೂತು ರಕ್ಷಿತಾ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ರಕ್ಷಿತಾರನ್ನು ಸ್ಲಮ್ ಎಂದು ಅಶ್ವಿನಿ ಗೌಡ ಕರೆದಿದ್ದರು. ಬಳಿಕ ಎಸ್ ಪದ ಬಳಕೆ ಮಾಡಿದ್ದರು. ಇದೇ ವಿಚಾರವಾಗಿ ಇದೀಗ ಪೊಲೀಸ್ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಬಿಡದಿ ಪೊಲೀಸ್ ಠಾಣೆಯಲ್ಲಿ ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಿಂದ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ಗೆ ಬಿಗ್‌ ರಿಲೀಫ್‌

ಬಿಗ್‌ಬಾಸ್ ಮನೆಯಲ್ಲಿ ಸಹಸ್ಪರ್ಧಿ ಬಗ್ಗೆ ಅಶ್ವಿನಿ ಗೌಡ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ದೂರು ನೀಡಿದ್ದಾರೆ. ಇದು ವ್ಯಕ್ತಿ ನಿಂದನೆ ಎಂದು ಆರೋಪಿಸಿರುವ ಅವರು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ಶೋ ಆಯೋಜಕರ ವಿರುದ್ಧವೂ ದೂರು ನೀಡಿದ್ದಾರೆ.

ಸಮಾಜದಲ್ಲಿ ಎಲ್ಲರೂ ಒಂದೇ, ಯಾವುದೇ ಜಾತಿ ಭೇದ ಹರಡಬಾರದು. ಅಶ್ವಿನಿ ಗೌಡ ಮಾತನ್ನು ತೆಗೆಯದೇ ಕಾರ್ಯಕ್ರಮ ಪ್ರಸಾರ ಮಾಡಿದ್ದು ತಪ್ಪು. ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಕೀಲರು ನೀಡಿದ ದೂರು ಆಧರಿಸಿ ಬಿಡದಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.

ಎಸ್ ಪದದ ವಿವಾದ
ರಕ್ಷಿತಾ ಶೆಟ್ಟಿ ಬಗ್ಗೆ ‘ಸ್ಲಮ್’ ಎಂದು ಅಶ್ವಿನಿ ಗೌಡ ಹೇಳಿದ್ದನ್ನು ಮ್ಯೂಟ್ ಮಾಡಲಾಗಿತ್ತು. ಆದರೆ ಆಕೆಯ ಪದ ಬಳಕೆ ವೀಕ್ಷಕರಿಗೆ ಅರ್ಥವಾಗಿತ್ತು. ಅಷ್ಟೇ ಅಲ್ಲ, ಮತ್ತೆ ಇದೇ ವಿಚಾರವಾಗಿ ಜಾಹ್ನವಿ ಬಳಿಕ ಮಾತನಾಡುತ್ತಾ ‘ಎಸ್‌’ ಅಂತ ಹೇಳ್ದೆ ಅಲ್ವಾ ಎಂದು ಅಶ್ವಿನಿ ಮತ್ತೆ ಅದೇ ಅರ್ಥದಲ್ಲಿ ಮಾತನಾಡಿದ್ದರು. ಜಿಯೋ ಹಾಟ್‌ಸ್ಟರ್‌ನಲ್ಲಿ ಇದು ಸ್ಟ್ರೀಮಿಂಗ್ ಆಗಿತ್ತು. ಬಳಿಕ ಅದನ್ನು ಎಡಿಟ್ ಮಾಡಿ ಅಪ್‌ಲೋಡ್ ಮಾಡಿದ್ದರು. ಆದರೂ ವೀಕ್ಷಕರು ಅದನ್ನು ಗಮನಿಸಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಸಿದ್ದರು.

ಅದೇ ದಿನ ರಾತ್ರಿ 11 ಗಂಟೆಗೆ ಮತ್ತೆ ಅಶ್ವಿನಿ ಹಾಗೂ ಜಾಹ್ನವಿ ಇಬ್ಬರೂ ಮಾತನಾಡುವ ವೇಳೆ “ಅವಳಿಗೆ ಫುಲ್ ಶೇಪ್‌ ಔಟ್ ಆಗೋಯ್ತು. ಏನು ಮಾತನಾಡಲಿಲ್ಲ ಇವತ್ತು. ನಾನು ಹೇಳಲಿಲ್ವಾ ಆ S.. ಎಂದು ಅಶ್ವಿನಿ ಮತ್ತೆ ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago